ಉಡುಪಿ, ಫೆ.25: ಎಂ.ಜಿ.ಎಂ ಸಂಧ್ಯಾ ಕಾಲೇಜು, ಉಡುಪಿ ಮತ್ತು ಐಸಿಎಐ ಉಡುಪಿ ಶಾಖೆ (SIRC) ಅವರ ಸಂಯುಕ್ತ ಆಶ್ರಯದಲ್ಲಿ “ಕೇಂದ್ರ ಬಜೆಟ್ ವಿಶ್ಲೇಷಣೆ” ಕುರಿತು ವಿದ್ಯಾರ್ಥಿ ವಿಚಾರ ಸಂಕಿರಣ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಸಿಎ ವೆಂಕಟರಮಣ ಕಾಮತ್ ಅವರು ಭಾಗವಹಿಸಿ ಕೇಂದ್ರ ಬಜೆಟ್ನ ಪ್ರಮುಖ ಅಂಶಗಳು, ಆರ್ಥಿಕ ಪರಿಣಾಮಗಳು ಹಾಗೂ ವಿದ್ಯಾರ್ಥಿಗಳಿಗೆ ಅದರ ಮಹತ್ವದ ಕುರಿತು ಸಮಗ್ರವಾಗಿ ವಿವರಿಸಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್ ನಾಯಕ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳಲ್ಲಿ ಆರ್ಥಿಕ ಜ್ಞಾನವನ್ನು ವಿಸ್ತರಿಸಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.
ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ ಶೆಟ್ಟಿ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಐಸಿಎಐ ಉಡುಪಿ ಶಾಖೆಯ ಎಸ್.ಐ.ಸಿ.ಎ.ಎಸ್.ಎ ಅಧ್ಯಕ್ಷರಾದ ಸಿಎ ಮಾಧುರಿ ಪ್ರಭು ಸ್ವಾಗತಿಸಿ, ಕಾರ್ಯದರ್ಶಿ ಚಂದ್ರ ಎಸ್. ನಿರೂಪಿಸಿದರು. ಖಜಾಂಚಿ ಅಶ್ವಥ್ ಶೆಟ್ಟಿ ಅತಿಥಿ ಪರಿಚಯ ನೀಡಿದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಕಾವ್ಯಶ್ರೀ ವಂದಿಸಿದರು.




By
ForthFocus™