Friday, June 19, 2026
Friday, June 19, 2026

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Entrepreneurship ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಶೇ. 70% ಮೊತ್ತ ಅಥವಾ ಗರಿಷ್ಠ ರೂ. 5.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದ್ದು ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 04 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳು ಸೇರಿದಂತೆ ಒಟ್ಟು 07 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿದ್ದು, 20 ರಿಂದ 55 ವರ್ಷ ವಯೋಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, 2 ನೇ ಮಹಡಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!