Saturday, February 28, 2026
Saturday, February 28, 2026

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

Date:

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ, ಉಡುಪಿಯ ವೆಂಟನಾ ಫೌಂಡೇಶನ್‌ನ ಸಹಯೋಗದಲ್ಲಿ ಆಯೋಜಿಸುತ್ತಿರುವ ಜನಪದ ದೇಶೀಯ ಕಲೆಗಳ ಕಾರ್ಯಾಗಾರವನ್ನು ಫೌಂಡೇಶನ್‌ನ ನಿರ್ದೇಶಕಿ ಶಿಲ್ಪಾ ಭಟ್‌ ಉದ್ಘಾಟಿಸಿದರು. ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ವಿವಿಧ ನೂತನ ಪ್ರಯೋಗ ಹಾಗೂ ಕಾರ್ಯಕ್ರಮಗಳಿಗೆ ವೆಂಟನಾ ಫೌಂಡೇಶನ್ ಸಹಕಾರ ನೀಡುತ್ತದೆ. ದೇಶೀಯ ಕಲೆಗಳು ಉಳಿಯುವಂತಾಗಲು ಈ ತೆರನಾದ ಕಾರ್ಯಾಗಾರಗಳು ಬಹು ಸಹಕಾರಿ. ಇದೊಂದು ಉಡುಪಿಯಂತಹ ಪುಟ್ಟ ಪಟ್ಟಣಕ್ಕೆ ರಾಷ್ಟ್ರಮಟ್ಟದಲ್ಲಿ ಮಾದರಿಯಾಗಬಹುದಾದ ಕಾರ್ಯಕ್ರಮ ಎಂದು ಹೇಳಿದರು.

ಇನ್ನೋರ್ವ ಅತಿಥಿ ಕದಿಕೆ ಟ್ರಸ್ಟ್ನ ಸ್ಥಾಪಕ ನಿರ್ದೇಶಕರಾದ ಮಮತಾ ರೈ, ಬಟ್ಟೆಯ ಮೇಲಿನ ಮಾತಾ ನಿ ಪಚೇಡಿ ಶೋಷಣೆಗೆ ಒಳಪಟ್ಟ ಒಂದು ಸಮುದಾಯದ ನೋವೇ ಕಲೆಯಾಗಿ ಮಾರ್ಪಾಟಾದ ಹಿನ್ನೆಲೆಯುಳ್ಳದ್ದು. ನಮ್ಮಲ್ಲಿನ ವಿನ್ಯಾಸಗಾರಿಕೆಯ ಪದವಿ ಪಡೆಯುತ್ತಿರುವ ಯುವ ಸಮುದಾಯಕ್ಕೆ ಈ ಭಾರತೀಯ ಕಲೆಗಾರಿಕೆಯ ತಾಂತ್ರಿಕ ಅಂಶಗಳು ವಿನೂತನ ಪ್ರಯೋಗಕ್ಕೆ ಎಡೆಮಾಡಿಕೊಡಬಲ್ಲುದು. ಈ ತೆರನಾದ ಕಾರ್ಯಕ್ರಮ ಇನ್ನಷ್ಟು ನಡೆಯಲಿ ಎಂದರು. ಬಡಗುಪೇಟೆ ಗ್ಯಾಲರಿಯ ಸಂತೋಷ್ ಪೈ ಉಪಸ್ಥಿತರಿದ್ದರು. ಕಾರ್ಯಾಗಾರದ ಸಂಯೋಜಕರಾದ ಜನಾರ್ದನ ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು.

ಬಟ್ಟೆಗೆ ಅಳಲೇಕಾರಿಯ ರಸವನ್ನು ಸವರಿ, ಬೆಲ್ಲ ಮತ್ತು ಕಬ್ಬಿಣದ ತುಕ್ಕನ್ನು ಕೊಳೆಸಿ ತಯಾರಿಸಿದ ದ್ರಾವಣದಿಂದ ಕಪ್ಪು ವರ್ಣವನ್ನು ಬರುವಂತೆ ಮಾಡಿಕೊಂಡು ಈ ಕಲಂಕಾರಿ ಕಲೆಯ ಚಿತ್ತಾರಗಳು ಬಟ್ಟೆಯ ಮೇಲೆಲ್ಲ ಹರಡಿಕೊಳ್ಳುತ್ತದೆ. ಈ ಕಲೆಯನ್ನು ಸುಮಾರು ನಾಲ್ಕು ದಶಕಗಳಿಗಿಂತಲೂ ಮಿಕ್ಕಿ ರಚಿಸುತ್ತಿರುವ ಜಗದೀಶ್ ಚಿತ್ತಾರವರು ಈ ಸರಣಿ ಕಲಾ ಕಾರ್ಯಾಗಾರದ ಭಾಗವಾಗಿ ಬಟ್ಟೆಯ ಮೇಲೆ ರಚಿಸಲ್ಪಡುವ ಗುಜರಾತ್‌ನ ಕಲಂಕಾರಿ ಹಾಗೂ ಮಾತಾ ನಿ ಪಚೇಡಿ ಈ ಬಾರಿ ಆಸಕ್ತರಿಗೆ ಕಲಿಸಿಕೊಡುತ್ತಿದ್ದಾರೆ. 28ನೇ ಶನಿವಾರ ಬ್ಲಾಕ್ ಪ್ರಿಂಟಿಂಗ್ ಕಲಂಕಾರಿ ಮತ್ತು 01 ನೇ ಭಾನುವಾರ ಮಾತಾ ನಿ ಪಚೇಡಿ ಕಾರ್ಯಾಗಾರಗಳು ಬಡಗುಪೇಟೆಯ ಗ್ಯಾಲರಿಯಲ್ಲಿ ನಡೆಯಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...
error: Content is protected !!