Thursday, July 30, 2026
Thursday, July 30, 2026

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

Date:

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2 ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಜಿಲ್ಲಾಡಳಿತದ ಕ್ರಮ: ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ. ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ : 0820-2574802 (1077-ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ “ಸಾರಥಿ ಸಹಾಯತಾ” (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!