Monday, July 27, 2026
Monday, July 27, 2026

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಸಂಶೋಧನಾ ವಿಧಾನಗಳ ಅರಿವು ಕಾರ್ಯಕ್ರಮ

Date:

ತೆಂಕನಿಡಿಯೂರು, ಮಾ.4: ಯಶಸ್ವಿ ಪ್ರಾಜೆಕ್ಟ್ಗಾಗಿ ಸ್ಪಷ್ಟ ಸಂಶೋಧನಾ ಸಮಸ್ಯೆ, ನಿರ್ದಿಷ್ಟ ಉದ್ದೇಶಗಳು, ಸೂಕ್ತ ಸಂಶೋಧನಾ ವಿನ್ಯಾಸ, ಸಾಹಿತ್ಯ ಪರಿಶೀಲನೆ ಹಾಗೂ ದತ್ತಾಂಶ ವಿಶ್ಲೇಷಣೆ ಅಗತ್ಯವೆಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಗ್ರಾಫಿಕ್ ಎರಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ರಶ್ಮಿ ಕೊಡಿಕಲ್ ಗುಣಮಟ್ಟದ ಶೈಕ್ಷಣಿಕ ಪ್ರಾಜೆಕ್ಟ್ ರೂಪಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಪರಿಶೀಲಿತ ವೈಜ್ಞಾನಿಕ ಪತ್ರಿಕೆಗಳು ಮತ್ತು ವಿಶ್ವಾಸಾರ್ಹ ದತ್ತಸಂಚಯಗಳ ಬಳಕೆ, ಮಾದರಿ ಆಯ್ಕೆ ವಿಧಾನಗಳು, ಪ್ರಾಥಮಿಕ ಮತ್ತು ದ್ವಿತೀಯ ದತ್ತಾಂಶ ಸಂಗ್ರಹ, ಮಾಪನ ಮಾಪಕಗಳು ಹಾಗೂ ವರದಿ ರಚನೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. ಸಂಶೋಧನಾ ಕಾರ್ಯದಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಸಾಧನಗಳ ಪರಿಣಾಮಕಾರಿ ಬಳಕೆ ಬಗ್ಗೆ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ಉಡುಪಿ ಇದರ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗಗಳ ವತಿಯಿಂದ “ಅತ್ಯುತ್ತಮ ಬಿಬಿಎ/ಬಿ.ಕಾಂ ಪ್ರಾಜೆಕ್ಟ್ನ ರೂಪುರೇಖೆ” ಎಂಬ ವಿಷಯದ ಕುರಿತ ಕಾರ್ಯಾಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಬಿಂದು ಟಿ ಸಂಯೋಜನೆ ಮಾಡಿದರು. ನಿರ್ವಹಣಾ ವಿಭಾಗ ಸಂಚಾಲಕರಾದ ಡಾ. ರಘು ನಾಯ್ಕರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ತೃತೀಯ ಬಿಬಿಎ ವಿದ್ಯಾರ್ಥಿನಿ ಅಂಬಿಕಾ ಪ್ರಾರ್ಥನೆಯನ್ನು ನೆರವೇರಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮರ್ವಿನ್ ಡಿಸೋಜಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!