Saturday, July 25, 2026
Saturday, July 25, 2026

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್: ಯಶ್ಪಾಲ್ ಸುವರ್ಣ

ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್: ಯಶ್ಪಾಲ್ ಸುವರ್ಣ

Date:

ಉಡುಪಿ, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ಕರ್ನಾಟಕ ಭೂಪಟದಲ್ಲಿ ಉಡುಪಿ ಜಿಲ್ಲೆಯ ಅಸ್ತಿತ್ವವನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತಿದ್ದು, ಜಿಲ್ಲೆಯ ಆರೋಗ್ಯ, ಶಿಕ್ಷಣ, ಧಾರ್ಮಿಕ, ಮೀನುಗಾರಿಕೆ, ಪ್ರವಾಸೋದ್ಯಮ ಸಹಿತ ಮೂಲ ಸೌಕರ್ಯಗಳ ಬಗ್ಗೆ ಜಿಲ್ಲೆಯ ಜನತೆಯ ನಿರೀಕ್ಷೆಗೆ ಈ ಬಾರಿಯ ಬಜೆಟ್ ನಲ್ಲಿ ತಣ್ಣೀರು ಎರಚಿದ್ದಾರೆ.

ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನದ ಬೇಡಿಕೆಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಒದಗಿಸಿಲ್ಲ, ಪ್ರತಿ ಬಾರಿಯಂತೆ ಸಿದ್ದರಾಮಯ್ಯ ಕರಾವಳಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೇ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಯಾವುದೇ ಅನುದಾನ ಅಭಿವೃದ್ಧಿ ಯೋಜನೆಗಳನ್ನು ನೀಡದೇ ಸೇಡಿನ ರಾಜಕೀಯ ಮಾಡಲು ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಅತೀ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ, ದಾಖಲೆಯ 17 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿಯಾಗಿಸಿ ಗರಿಷ್ಠ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೇರುವ ಮೂಲಕ “ಸಾಲ ರಾಮಯ್ಯ” ರಾಗಿದ್ದಾರೆ.

ಕರಾವಳಿ ಜಿಲ್ಲೆಯನ್ನು ನಿರಂತರ ಕಡೆಗಣಿಸಿ ಜಿಲ್ಲೆಯ ಅಭಿವೃದ್ಧಿಗೆ ಕೊಡಲಿಯೇಟು ನೀಡಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!