Sunday, July 26, 2026
Sunday, July 26, 2026

ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಉಡುಪಿ, ಮಾ.7: ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು, ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು. ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ, ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಗೊಳಿಸಲು ತಿಳಿಸಿದರು. ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಬೇಕು. ಎಲ್ಲ ಅಗತ್ಯ ಕ್ರಮಗಳನ್ನು ಕಾಲಮಿತಿಯಲ್ಲಿ ನಡೆಸಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯ ಕುಮಾರ್ ಶೆಟ್ಟಿ, ಸಹಾಯಕ ಕಮಿಷನರ್ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!