Tuesday, March 10, 2026
Tuesday, March 10, 2026

ಡುಂಡಿರಾಜರ ಹೊಸ ಕವಿತೆಗಳು

ಡುಂಡಿರಾಜರ ಹೊಸ ಕವಿತೆಗಳು

Date:

ಉಡುಪಿ, ಮಾ.7: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಯೋಜನೆಯಲ್ಲಿ ಹನಿ ಕವಿತೆಗಳ ರಾಜ ಡುಂಡಿರಾಜರ ಹೊಸ ಕವಿತೆಗಳು ಕಾರ್ಯಕ್ರಮ ಉಡುಪಿಯ ಬುಡ್ನಾರಿನ ಅಂಶು ಮನೆಯಲ್ಲಿ ನಡೆಯಿತು.

ಸುಮಾರು ಒಂದು ಗಂಟೆಗಳ ಕಾಲ ಕವಿ ಡುಂಡಿರಾಜರು ಉಡುಪಿಯ ಸಾಹಿತ್ಯಾಸಕ್ತರರಿಗೆ ತಮ್ಮ ಹೊಸ ಹನಿಗವನಗಳು, ಹೈಕುಗಳ ಮೂಲಕ ಮನಸ್ಸನ್ನು ಮುಧಗೊಳಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ಸುಜಿ ಕುರ್ಯ ತಮ್ಮ ಸ್ವರಚಿತ ಹನಿಗವನಗಳನ್ನು ಪ್ರಸ್ತುತ ಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಕ ಸಾ ಪ ಉಡುಪಿ ತಾಲೂಕಿನ ಅಧ್ಯಕ್ಷ ರವಿರಾಜ್ ಹೆಚ್. ಪಿ.. ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್, ಕ ಸಾ ಪ ದ ನಾರಾಯಣ ಮಡಿ ಭುವನಪ್ರಸಾದ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಸಂಧ್ಯಾ ಶೆಣೈ ನಿರೂಪಿಸಿ, ಪೂರ್ಣಿಮಾ ಜನಾರ್ಧನ್ ವಂದಿಸಿದರು. ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಅಂಚನ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ನೂತನ ಅಗ್ನಿಶಾಮಕದಳ ಘಟಕಕ್ಕೆ ಶಿಲಾನ್ಯಾಸ

ಮಣಿಪಾಲ, ಮಾ.9: ಮಣಿಪಾಲದ ಅದರ್ಶನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ...

ದ.ಕ. ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ

ಉಡುಪಿ, ಮಾ.9: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು...

ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ಕಾಮಗಾರಿ ವೀಕ್ಷಣೆ

ಉಡುಪಿ, ಮಾ.9: ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಜಂಕ್ಷನ್ ನಿಂದ...

ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಉಡುಪಿ, ಮಾ.9: ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು...
error: Content is protected !!