Friday, March 13, 2026
Friday, March 13, 2026

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

Date:

ಮಣಿಪಾಲ, ಮಾ.12: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಉಡುಪಿಯ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಒಂದು ದಿನದ ಬ್ಯಾಂಕರ್ಸ್ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾದ ಶ್ಯಾಮ್ ಕಾದ್ರೊಳ್ಳಿ ಉದ್ಘಾಟಿಸಿದರು. ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ ಮಹಿಳೆಯರು ಆರ್ಥಿಕವಾಗಿ ಸಧೃಡರಾಗಲು ಅನುಕೂಲವಾಗುತ್ತದೆ.ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಬ್ಯಾಂಕ್ ಸಾಲ ಪಡೆದು ಸ್ವ ಉದ್ಯೋಗ ಚಟುವಟಿಕೆ ಆರಂಭಿಸುವುದರ ಮೂಲಕ ಆರ್ಥಿಕ ಸಬಲೀಕರಣ ಹೊಂದುತಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣಗೊಳಿಸುವಲ್ಲಿ ಬ್ಯಾಂಕ್ ಪಾತ್ರ ಬಹು ಮುಖ್ಯ ಎಂದು ತಿಳಿಸಿ ಕಾರ್ಯಾಗಾರಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾದ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ವಿಜಯ್ ಕುಮಾರ್ ಮಾತನಾಡಿ, ಬ್ಯಾಂಕ್ ಮುಕಾಂತರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಂಜೀವಿನಿ ಯೋಜನೆಯ ಎಲ್ಲಾ ಮಹಿಳೆಯರಿಗೆ ಬ್ಯಾಂಕ್ ಸಂಪರ್ಕ ಕಲ್ಪಿಸಲಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ಉತ್ತಮ ಮನೋಭಾವದ ಮೂಲಕ ಗ್ರಾಮೀಣ ಪ್ರದೇಶದ ಜನರೊಂದಿಗೆ ವ್ಯವಹರಿಸ ಬೇಕು. ಆ ಮೂಲಕ ಎಲ್ಲಾ ಜನರಿಗೆ ಬ್ಯಾಂಕ್ನಲ್ಲಿರುವ ಯೋಜನೆಗಳು ವ್ಯೆವಸ್ಥಿತ ತಲುಪಬೇಕು ಎಂದು ತಿಳಿಸಿದರು.

ಕಾರ್ಯಗಾರದಲ್ಲಿ ಎನ್.ಐ.ಆರ್.ಡಿ ಸಂಸ್ಥೆಯ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಕಿಶೋರ್ ಸಿಂಗ್ ಅವರು ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ, ಮಹಿಳಾ ಉದ್ಯಮದಾರರಿಗೆ ಬ್ಯಾಂಕ್ ಸಾಲ ಸಂಪರ್ಕ, ಹಣಕಾಸು ಸೇರ್ಪಡೆ, ಹಣಕಾಸು ಸಾಕ್ಷರತೆ ಗ್ರಾಮೀಣ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಜಿಲ್ಲೆಯ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರುಗಳಿಗೆ ಮಾಹಿತಿ ನೀಡಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಹರೀಶ್, ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಬೊಮ್ಮಯ್ಯ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ನವ್ಯ, ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಯುವ ವೃತ್ತಿಪರರಾದ ರವಿ ಭೋವಿ, ಶಿವಾನಂದ್, ವಲಯ ಮೇಲ್ವಿಚಾರಕರಾದ ಮಹೇಂದ್ರ, ಹರ್ಷಿತಾ, ಲಕ್ಷ್ಮಿ, ಆರ್ಥಿಕ ಸಂಪನ್ಮೂಲ ಕೇಂದ್ರದ ಸಿಬ್ಬಂದಿ, ವಿವಿಧ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವೀಣಾ ಕಛೇರಿ

ಉಡುಪಿ, ಮಾ.12: ರಂಜನಿ ಮೆಮೋರಿಯಲ್ ಟ್ರಸ್ಟ್ ಮತ್ತು ಸುಘೋಷ ಉಡುಪಿ ವತಿಯಿಂದ...

ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ಮಾ.12: ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಉಡುಪಿ...

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್‌ಶಿಪ್–2026ಕ್ಕೆ ಭರ್ಜರಿ ಚಾಲನೆ

ನಿಟ್ಟೆ, ಮಾ.12: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ...
error: Content is protected !!