Monday, March 23, 2026
Monday, March 23, 2026

ಮಣೂರು: ಸ್ವಚ್ಛತಾ ಅಭಿಯಾನ

ಮಣೂರು: ಸ್ವಚ್ಛತಾ ಅಭಿಯಾನ

Date:

ಕೋಟ, ಮಾ.22: ಮಣೂರು ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ಸಾನಿಧ್ಯ ಕಾರಣಿಕ ಕ್ಷೇತ್ರವಾಗಿದ್ದು ಇಲ್ಲಿನ ವಾರ್ಷಿಕ ರಥೋತ್ಸವ ಅರ್ಥಪೂರ್ಣವಾಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಭಾಗವಹಿಸುವಿಕೆ ಬಹುಮುಖ್ಯವಾಗಿದೆ ಎಂದು ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದರು.

ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 295 ನೇ ವಾರದ ಪರಿಸರ ಸ್ನೇಹಿ ಕಾರ್ಯಕ್ರಮದ ಸಲುವಾಗಿ ಮಣೂರು ದೇಗುಲ ಜಾತ್ರೆಯ ಪ್ರಯುಕ್ತ ಮಣೂರು ಫ್ರೆಂಡ್ಸ್ ಮಣೂರು ಇವರ ಸಂಯೋಜನೆಯೊಂದಿಗೆ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಗುಲ ಸ್ವಚ್ಛತೆಯಿಂದ ಮನಸ್ಸು ಭಕ್ತಿಭಾವಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಇಲ್ಲಿನ ಈ ಸಂಘಟನೆಗಳ ದೇಗುಲ ಸ್ವಚ್ಛತಾ ಕಾರ್ಯಕ್ರಮ ನಿದರ್ಶನವಾಗಿದೆ ಎಂದು ಹೇಳಿದರು.

ಪಂಚವರ್ಣದ ಅಧ್ಯಕ್ಷ ಮನೋಹರ್ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಪಂಚವರ್ಣ ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ, ಮಣೂರು ಫ್ರೆಂಡ್ಸ್ ಗೌರವಾಧ್ಯಕ್ಷ ಸುರೇಶ್ ಆಚಾರ್ ಮುಂತಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಂಗಳೂರು ತಲುಪಿದ ಅಕ್ವಾ ಟೈಟಾನ್ ಹಡಗು

ಮಂಗಳೂರು, ಮಾ.22: ರಷ್ಯಾದ ಕಚ್ಚಾ ತೈಲ ಸಾಗಿಸುವ ಹಡಗು ಅಕ್ವಾ ಟೈಟಾನ್...

ಅಗತ್ಯ ಇಂಧನಗಳ ಕೊರತೆಯಿಲ್ಲ, ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನು ಲಭ್ಯವಿದೆ: ಸರ್ಕಾರ

ನವದೆಹಲಿ, ಮಾ.22: ದೇಶಾದ್ಯಂತ ಅಗತ್ಯ ಇಂಧನಗಳ ಕೊರತೆಯಿಲ್ಲ ಎಂದು ಸರ್ಕಾರ ಭರವಸೆ...

ನವಮಂಗಳೂರು ಬಂದರಿನಲ್ಲಿ ಅಕ್ವಾ ಟೈಟಾನ್ ಹಡಗಿನಿಂದ ಎಂಆರ್‌ಪಿಎಲ್ ಸಂಸ್ಕರಣಾಗಾರಕ್ಕೆ ಕಚ್ಚಾ ತೈಲ ವರ್ಗಾವಣೆ ಆರಂಭ

ಮಂಗಳೂರು, ಮಾ.22: ನವಮಂಗಳೂರು ಬಂದರಿನಲ್ಲಿರುವ ಅಕ್ವಾ ಟೈಟಾನ್ ಹಡಗಿನಿಂದ ಮಂಗಳೂರು ರಿಫೈನರಿ...

ಪಾಂಡೇಶ್ವರ: ಅಕ್ಷರ ಸಂತ ಹರೇಕಳ ಹಾಜಬ್ಬಗೆ ಯಕ್ಷಮಿತ್ರರಿಂದ ಸನ್ಮಾನ

ಕೋಟ, ಮಾ.22: ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಯಕ್ಷಮಿತ್ರರು ನಡೆಸಿದ ಸನ್ಮಾನ...
error: Content is protected !!