Thursday, July 23, 2026
Thursday, July 23, 2026

ಸಾಸ್ತಾನ: ಆರೋಗ್ಯ ಶಿಬಿರ

ಸಾಸ್ತಾನ: ಆರೋಗ್ಯ ಶಿಬಿರ

Date:

ಕೋಟ, ಮಾ.22: ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಸೇವೆ ಬಹುಮುಖ್ಯ. ಅದೇ ರೀತಿ ಆರೋಗ್ಯವಂತ ಸಮಾಜಕ್ಕೆ ಆರೋಗ್ಯ ಶಿಬಿರಗಳು ಅಡಿಗಲ್ಲು ಇದ್ದಂತೆ ಎಂದು ಸಾಸ್ತಾನದ ಸಾಮಾಜಿಕ ಕಾರ್ಯಕರ್ತ ಐರೋಡಿ ವಿಠ್ಠಲ್ ಪೂಜಾರಿ ಹೇಳಿದರು. ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ ಇಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ, ರೋಟರಿ ಕ್ಲಬ್ ಸಾಸ್ತಾನ – ಹಂಗಾರಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಎ.ಜೆ ಆಸ್ಪತ್ರೆ ಮಂಗಳೂರು ಇದರ ಹೃದ್ರೋಗ ತಜ್ಞ ಡಾ.ಅಶೋಕ್ ಉಪಾಧ್ಯಾಯ, ಎಜೆ ಆಸ್ಪತ್ರೆಯ ಪ್ರಮುಖ ವೈದ್ಯರಾದ ಆರತಿ ಎಸ್ ರಾಜ್, ನಿರೀಕ್ಷಾ, ನಿಖಿಲ್ ಉಪಸ್ಥಿತರಿದ್ದರು. ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ರಾಘವೇಂದ್ರ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಫಾರ್ಮಸಿ ಅಧಿಕಾರಿ ಸೀಮಾ ಮ್ಯಾಥ್ಯು ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಮುರುಳೀಧರ ನಾಯರಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!