Friday, July 24, 2026
Friday, July 24, 2026

ಪಾಂಡೇಶ್ವರ: ಅಕ್ಷರ ಸಂತ ಹರೇಕಳ ಹಾಜಬ್ಬಗೆ ಯಕ್ಷಮಿತ್ರರಿಂದ ಸನ್ಮಾನ

ಪಾಂಡೇಶ್ವರ: ಅಕ್ಷರ ಸಂತ ಹರೇಕಳ ಹಾಜಬ್ಬಗೆ ಯಕ್ಷಮಿತ್ರರಿಂದ ಸನ್ಮಾನ

Date:

ಕೋಟ, ಮಾ.22: ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಯಕ್ಷಮಿತ್ರರು ನಡೆಸಿದ ಸನ್ಮಾನ ಅರ್ಥಪೂರ್ಣ ಎಂದು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಹೇಳಿದರು. ಶನಿವಾರ ಸಾಸ್ತಾನದ ಪಾಂಡೇಶ್ವರ ಯಡಬೆಟ್ಟು ಯಕ್ಷಮಿತ್ರರು ಆಯೋಜಿಸಿದ ಪಂಚಮ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಗೌರವಿಸಿ ಅವರು ಮಾತನಾಡಿದರು. ಅಕ್ಷರ ದೇಗುಲವನ್ನು ಕಟ್ಟಿ ಸಮಾಜಕ್ಕೆ ತನ್ನನ್ನು ಸಮರ್ಪಿಸಿಕೊಂಡ ಹಾಜಬ್ಬ ಎನ್ನುವ ನಿಸ್ವಾರ್ಥ ಸೇವಾರ್ಥಿ ತನ್ನ ಸರ್ವಸ್ವವನ್ನೂ ಈ ಸಮಾಜಕ್ಕೆ ಧಾರೆ ಎರೆದಿದ್ದಾರೆ. ಯಕ್ಷಮಿತ್ರರು ಇಂಥ ಸಾಧಕರನ್ನು ಗೌರವಿಸಿರುವುದು ಶ್ಲಾಘನೀಯ ಎಂದರು.

ಪಾಂಡೇಶ್ವರ ಕಳಿಬೈಲು ಶ್ರೀ ಕ್ಷೇತ್ರದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ, ಸಾಸ್ತಾನ ಗೋಳಿಗರಡಿ ದೈವಸ್ಥಾನದ ಪಾತ್ರಿ ಶಂಕರ್ ಪೂಜಾರಿ, ಯಕ್ಷ ಮಿತ್ರರ ಬಳಗದ ಕರಿಯ ದೇವಾಡಿಗ, ಅಣ್ಣಯ್ಯ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಸಾಸ್ತಾನ ಗೋಳಿಗರಡಿ ದೈವಸ್ಥಾನದಿಂದ ಅದ್ಧೂರಿಯ ಚಂಡೆ, ಕೀಲು ಕುದುರೆ, ಕುಣಿತ ಭಜನೆಯೊಂದಿಗೆ ಮೆರವಣಿಗೆ ಮೂಲಕ ದೇವರ ಪೆಟ್ಟಿಗೆಯನ್ನು ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ತರಲಾಯಿತು. ಶ್ರೀ ಆದು ಧೂಮಾವತಿ ಶ್ರೀದೇವಿ ಬೈದೇತಿ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆಯಕ್ಷಗಾನ ಪ್ರದರ್ಶನಗೊಂಡಿತು. ನಾಗೇಶ್ ಯಡಬೆಟ್ಟು ಸಹಕರಿಸಿದರು. ಶ್ರೀಷ ಪಾಂಡೇಶ್ವರ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!