Friday, July 24, 2026
Friday, July 24, 2026

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

Date:

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ಖ್ಯಾತ ರಂಗ ನಿರ್ದೇಶಕ ಜೀವನರಾಂ ಸುಳ್ಯ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಅವಿನಾಶ್ ಕಾಮತ್ ಇವರ ನೇತೃತ್ವದಲ್ಲಿ ಕೂತು ಮಾತಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ನಮ್ಮ ಋಣಾತ್ಮಕ ಅಂಶಗಳನ್ನು ಮತ್ತೊಬ್ಬರಿಗೆ ತಿಳಿಸದೆ, ಅದನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಪರಿಪಾಠ ಬೆಳೆಯಬೇಕು ಎಂದರು. ಅವರ ಬದುಕಿನ ರೋಚಕ ಕಥೆಗಳನ್ನು ವಿವರಿಸುತ್ತಾ ಅವರ ಸಾಧನೆಯ ಬಗ್ಗೆ ವಿಸ್ತಾರವಾಗಿ ತಿಳಿಸಿದರು.

ಉಡುಪಿಯ ಶಾರದಾ ಮಂಟಪ ರಸ್ತೆಯ ರಂಗವಲ್ಲಿ ಮನೆಯ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಿತು. ಬದುಕಿನಲ್ಲಿ ನಡೆದ ಹಲವು ಘಟನೆಗಳು, ಕಷ್ಟದಿಂದ ಮೇಲೆದ್ದು ಬಂದ ರೋಚಕ ಕಥೆಗಳು ಸಭಿಕರಿಗೆ ಭಾವನಾತ್ಮಕವಾಗಿ ಕಥೆಗಳ ಮೂಲಕ ವಿವರಿಸಿದರು. ನಿರೂಪಕ ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಜೀವನ್ ರಾಮ್ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಸ್ವಾಗತಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ವಿಶ್ವನಾಥ್ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಕಸಾಪ ಉಡುಪಿ ತಾಲೂಕಿನ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಧ್ಯಾ ಶೆಣೈ, ಶಿಲ್ಪಾ ಜೋಶಿ ರಾಘವೇಂದ್ರ ಪ್ರಭು ಕರ್ವಾಲು, ಸಿದ್ದಬಸಯ್ಯ ಸ್ವಾಮಿ ಚಿಕ್ಕ ಮಠ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!