Friday, April 24, 2026
Friday, April 24, 2026

ಕೋಟೇಶ್ವರ ಕಾಲೇಜು: ಕಾರ್ಯಾಗಾರ

ಕೋಟೇಶ್ವರ ಕಾಲೇಜು: ಕಾರ್ಯಾಗಾರ

Date:

ಕುಂದಾಪುರ, ಮಾ.27: ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ವ್ಯವಹಾರ ಕ್ಷೇತ್ರದ  ಹೊಸ ಮಾದರಿಗಳು  ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು. ಡಾ. ಲೋಕೇಶ ಸಹಾಯಕ ಪ್ರಾಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವ್ಯವಹಾರ ರಂಗದಲ್ಲಿ ಬದಲಾವಣೆಗಳು ನಿರಂತರವಾಗಿ ನಡೆಯುತ್ತಿರುತ್ತದೆ ಯಾವುದೇ ಹೊಸ ವ್ಯವಹಾರ ಮಾದರಿಯ ಅನ್ವೇಷಣೆ ಹಾಗೂ ಚಾಲ್ತಿಯಲ್ಲಿರುವ ಮಾದರಿಗಳಲ್ಲಿನ  ಬದಲಾವಣೆಗಳು ಹಲವಾರು ಸವಾಲುಗಳನ್ನು ಸೃಷ್ಟಿಸುತ್ತದೆ ಹಾಗೂ ಹೊಸ ಅವಕಾಶಗಳನ್ನು ತೆರೆದು ಕೊಡುತ್ತದೆ. ಉದ್ಯಮ ರಂಗದ ಮಾದರಿಗಳಲ್ಲಾಗುವ  ವ್ಯತ್ಯಾಸವು ಉದ್ದಿಮೆದಾರರ,  ಉದ್ಯೋಗಿಗಳ, ಗ್ರಾಹಕರ ಹಾಗೂ ಉದ್ಯೋಗ ಆಕಾಂಕ್ಷಿಗಳ ಜೀವನದ ಮೇಲೆ ಪ್ರಭಾವವನ್ನು ಬೀರುತ್ತದೆ. ಕ್ರಿಯಾತ್ಮಕ ವ್ಯವಹಾರ ಕ್ಷೇತ್ರದ ಬದಲಾವಣೆಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ಈ ನೂತನ ಮಾದರಿಗಳು ಹೇಗೆ ಹುಟ್ಟಿಕೊಳ್ಳುತ್ತವೆ ಹಾಗೂ ಈ ಮಾದರಿಗಳು ಹುಟ್ಟಿಕೊಂಡಾಗ  ಹಿತಾಸಕ್ತಿದಾರರ ಮೇಲೆ ಆಗುವ ಪ್ರಭಾವಗಳನ್ನು  ಸೂಕ್ಷ್ಮವಾಗಿ ಅವಲೋಕಿಸಿ  ಅದರಿಂದ ಒದಗಿ ಬರುವ ಅವಕಾಶಗಳನ್ನು ಬಳಸಿಕೊಳ್ಳುವ ಬುದ್ಧಿವಂತಿಕೆ ನಮ್ಮಲ್ಲಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಮರಾಯ ಆಚಾರ್ಯ ಮಾತನಾಡಿ, ವ್ಯವಹಾರ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳು ಬಹಳ ಶೀಘ್ರವಾಗಿ ನಡೆಯುತ್ತಿರುತ್ತದೆ. ನಗದು ವ್ಯವಹಾರದಿಂದ ಡಿಜಿಟಲ್ ವ್ಯವಹಾರಗಳಿಗೆ ಬದಲಾದಾಗ ಬ್ಯಾಂಕ್ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಆಗಿರುವ ಗೊಂದಲ, ಸವಾಲುಗಳು  ಹಾಗೂ ಅನುಕೂಲತೆಗಳನ್ನು ನಾವೆಲ್ಲ ಗಮನಿಸಿದ್ದೇವೆ. ಹಿಂದಿನ ದಿನಗಳಲ್ಲಿದ್ದ ಕೊಂಡುಕೊಳ್ಳುವಿಕೆಯ ಮಾದರಿ ಬದಲಾಗಿ ಇಂದು ಆನ್ಲೈನ್ ವ್ಯವಹಾರವೇ ಜನರಿಗೆ ಹತ್ತಿರವಾಗುತ್ತಿದೆ. ವ್ಯವಹಾರದ ಎಲ್ಲಾ ರಂಗಗಳಲ್ಲೂ ಗಣಕಯಂತ್ರಗಳು, ಡಿಜಿಟಲ್ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆಯ ಬಳಕೆ ಅಧಿಕವಾಗಿದೆ. ಇಂತಹ ಸಂದರ್ಭದಲ್ಲಿ ಈ ಎಲ್ಲಾ ಬದಲಾವಣೆಗಳ ಪರಿಣಾಮವನ್ನು ನಾವೆಲ್ಲರೂ ತಿಳಿದುಕೊಂಡು ಈ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗಬೇಕಾಗಿದೆ ಎಂದರು. 

ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಉದಯ ಶೆಟ್ಟಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ. ನಾಗರಾಜ ಯು., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ನಾಗರಾಜ ವೈದ್ಯ ಎಂ., ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಶೇಖರ ಬಿ., ಹಾಗೂ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಪೈ ಹಾಗೂ ಉಪನ್ಯಾಸಕರಾದ ಉಜ್ವಲ ಶೆಟ್ಟಿ, ಸಾವಿತ್ರಿ, ಶಾಂತಿ ಉಪಸ್ಥಿತರಿದ್ದರು. ಪೂಜಾ ಸ್ವಾಗತಿಸಿ, ಅಮೃತ ಪೂಜಾರಿ   ಕಾರ್ಯಕ್ರಮ ನಿರೂಪಿಸಿದರು. ಪ್ರತಿಮಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಮಿಳುನಾಡಿನಲ್ಲಿ ಶೇ. 85; ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಶೇ. 92 ಮತದಾನ

ನವದೆಹಲಿ, ಏ.24: ತಮಿಳುನಾಡಿನಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆ ಮತ್ತು ಪಶ್ಚಿಮ...

ನಂದಳಿಕೆ: ಅಬ್ಬನಡ್ಕ ಕ್ರಿಕೆಟ್ ಟ್ರೋಫಿ 2026 ಉದ್ಘಾಟನೆ

ಬೆಳ್ಮಣ್, ಏ.24: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಭಗೀರಥರ ತಪಸ್ಸು ಪರಿಶ್ರಮ ಬದುಕಿಗೆ ಮಾದರಿ: ಎಂ ಎ ಗಫೂರ್

ಉಡುಪಿ, ಏ.23: ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು...
error: Content is protected !!