Sunday, March 29, 2026
Sunday, March 29, 2026

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

Date:

ಕೊಡವೂರು, ಮಾ.29: ಉಡುಪಿ ನಗರಸಭೆ ಕೊಡವೂರು ವಾರ್ಡಿನ ವಿಪ್ರ ಭವನದ ಬಳಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ 1.5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೊಡವೂರು ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿರುವ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ವಿಶೇಷ ಆದ್ಯತೆ ನೀಡಿ ಸಣ್ಣ ನೀರಾವರಿ ಇಲಾಖೆಯ ಮೂಲಕ 4 ಕೋಟಿ ಅನುದಾನ ಒದಗಿಸಿ ಕಾಮಗಾರಿ ಆರಂಭಗೊಂಡಿದ್ದು, ಇಂದ್ರಾಣಿ ನದಿ ತ್ಯಾಜ್ಯ ನೀರಿನಿಂದ ಮಲಿನಗೊಂಡು ಸ್ಥಳೀಯ ಜನರು ಗಂಭೀರ ಸಮಸ್ಯೆ ಎದುರಿಸುತ್ತಿದ್ದು ಈಗಾಗಲೇ 30 ಕೋಟಿ ವೆಚ್ಚದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.

ನಿಕಟಪೂರ್ವ ನಗರಸಭಾ ಸದಸ್ಯರಾದ ವಿಜಯ ಕೊಡವೂರು ಮಾತನಾಡಿ, ಶಾಸಕ ಯಶ್ಪಾಲ್ ಸುವರ್ಣ ಕೊಡವೂರು ವಾರ್ಡಿನ 3 ಕೆರೆಗಳ ಅಭಿವೃದ್ಧಿಗೆ ಸುಮಾರು 2.25 ಕೋಟಿ ಅನುದಾನ ಒದಗಿಸಿದ್ದು, ಹಲವು ರಸ್ತೆಗಳ ಅಭಿವೃದ್ಧಿ, ದಾರಿ ದೀಪ ವ್ಯವಸ್ಥೆ, ನಮ್ಮ ಕ್ಲಿನಿಕ್ ಸಹಿತ ವಿವಿಧ ಯೋಜನೆಗಳಿಗೆ ವಿಶೇಷ ಸಹಕಾರ ನೀಡಿದ್ದು, ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ 4 ಕೋಟಿ ಅನುದಾನ ಮಂಜೂರು ಮಾಡಿರುವ ಶಾಸಕರಿಗೆ ವಾರ್ಡಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸ್ಥಳೀಯ ಮುಖಂಡರಾದ ರವಿರಾಜ್ ಹೆಗ್ಡೆ, ಕಾಳು ಸೇರಿಗಾರ, ರಾಘವೇಂದ್ರ ರಾವ್, ಹರೀಶ್ ಕೆ. ಕೋಟ್ಯಾನ್, ನಾರಾಯಣ ಬಲ್ಲಾಳ್, ವಿನಯ ಪಡುಕರೆ, ಹರೀಶ್ ಪಾಳೆಕಟ್ಟೆ, ಅಮಿತ್ ಗರ್ಡೆ, ವಿನಯ ಗರ್ಡೆ ಉಪಸ್ಥಿತರಿದ್ದರು. ಪ್ರಭಾತ್ ಕೊಡವೂರು ಸ್ವಾಗತಿಸಿ, ರವಿ ಸಾಲ್ಯಾನ್ ಪಾಳೆಕಟ್ಟೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ

ಕಾಪು, ಮಾ.29: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ...

ತೆಂಕನಿಡಿಯೂರು ಕಾಲೇಜು: ಡೇಟಾ ಎನಾಲಿಸಿಸ್ ಕಾರ್ಯಾಗಾರ

ತೆಂಕನಿಡಿಯೂರು, ಮಾ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ: ರಾಘವೇಂದ್ರ ಕರ್ವಾಲು

ಉಡುಪಿ, ಮಾ.29: ಗಿಡಮರಗಳು, ಪ್ರಾಣಿ-ಪಕ್ಷಿಗಳು ಮತ್ತು ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ...

ದೇಶದ ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಿದೆ: ಸರ್ಕಾರ

ನವದೆಹಲಿ, ಮಾ.29: ದೇಶಾದ್ಯಂತದ ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಸಾಕಷ್ಟು ಪೆಟ್ರೋಲ್ ಮತ್ತು...
error: Content is protected !!