Saturday, June 6, 2026
Saturday, June 6, 2026

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

Date:

ಕೊಡವೂರು, ಮಾ.29: ಉಡುಪಿ ನಗರಸಭೆ ಕೊಡವೂರು ವಾರ್ಡಿನ ವಿಪ್ರ ಭವನದ ಬಳಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ 1.5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೊಡವೂರು ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿರುವ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ವಿಶೇಷ ಆದ್ಯತೆ ನೀಡಿ ಸಣ್ಣ ನೀರಾವರಿ ಇಲಾಖೆಯ ಮೂಲಕ 4 ಕೋಟಿ ಅನುದಾನ ಒದಗಿಸಿ ಕಾಮಗಾರಿ ಆರಂಭಗೊಂಡಿದ್ದು, ಇಂದ್ರಾಣಿ ನದಿ ತ್ಯಾಜ್ಯ ನೀರಿನಿಂದ ಮಲಿನಗೊಂಡು ಸ್ಥಳೀಯ ಜನರು ಗಂಭೀರ ಸಮಸ್ಯೆ ಎದುರಿಸುತ್ತಿದ್ದು ಈಗಾಗಲೇ 30 ಕೋಟಿ ವೆಚ್ಚದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ಈ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.

ನಿಕಟಪೂರ್ವ ನಗರಸಭಾ ಸದಸ್ಯರಾದ ವಿಜಯ ಕೊಡವೂರು ಮಾತನಾಡಿ, ಶಾಸಕ ಯಶ್ಪಾಲ್ ಸುವರ್ಣ ಕೊಡವೂರು ವಾರ್ಡಿನ 3 ಕೆರೆಗಳ ಅಭಿವೃದ್ಧಿಗೆ ಸುಮಾರು 2.25 ಕೋಟಿ ಅನುದಾನ ಒದಗಿಸಿದ್ದು, ಹಲವು ರಸ್ತೆಗಳ ಅಭಿವೃದ್ಧಿ, ದಾರಿ ದೀಪ ವ್ಯವಸ್ಥೆ, ನಮ್ಮ ಕ್ಲಿನಿಕ್ ಸಹಿತ ವಿವಿಧ ಯೋಜನೆಗಳಿಗೆ ವಿಶೇಷ ಸಹಕಾರ ನೀಡಿದ್ದು, ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ 4 ಕೋಟಿ ಅನುದಾನ ಮಂಜೂರು ಮಾಡಿರುವ ಶಾಸಕರಿಗೆ ವಾರ್ಡಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸ್ಥಳೀಯ ಮುಖಂಡರಾದ ರವಿರಾಜ್ ಹೆಗ್ಡೆ, ಕಾಳು ಸೇರಿಗಾರ, ರಾಘವೇಂದ್ರ ರಾವ್, ಹರೀಶ್ ಕೆ. ಕೋಟ್ಯಾನ್, ನಾರಾಯಣ ಬಲ್ಲಾಳ್, ವಿನಯ ಪಡುಕರೆ, ಹರೀಶ್ ಪಾಳೆಕಟ್ಟೆ, ಅಮಿತ್ ಗರ್ಡೆ, ವಿನಯ ಗರ್ಡೆ ಉಪಸ್ಥಿತರಿದ್ದರು. ಪ್ರಭಾತ್ ಕೊಡವೂರು ಸ್ವಾಗತಿಸಿ, ರವಿ ಸಾಲ್ಯಾನ್ ಪಾಳೆಕಟ್ಟೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...
error: Content is protected !!