ಉಡುಪಿ, ಮಾ.30: ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ ಸೂಕ್ತ ಸಮಯಕ್ಕೆ ರೈಲು ಹೊರಡಿಸಲಾಗಿದೆ. ಈ ಯೋಜನೆಯನ್ನು ಪ್ರಯಾಣಿಕರು ಬಳಸಬಹುದಾಗಿದೆ.
ಈ ಯೋಜನೆಯನ್ನು ಒದಗಿಸಿದ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ ಸೋಮಣ್ಣ ಅವರಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಂಸದರು ತಿಳಿಸಿದ್ದಾರೆ.




By
ForthFocus™