Friday, August 21, 2026
Friday, August 21, 2026

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಮಾ.30: ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ ಸೂಕ್ತ ಸಮಯಕ್ಕೆ ರೈಲು ಹೊರಡಿಸಲಾಗಿದೆ. ಈ ಯೋಜನೆಯನ್ನು ಪ್ರಯಾಣಿಕರು ಬಳಸಬಹುದಾಗಿದೆ.
ಈ ಯೋಜನೆಯನ್ನು ಒದಗಿಸಿದ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ ಸೋಮಣ್ಣ ಅವರಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಂಸದರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಬ್ಯಾರಿಕೇಡ್‌ ಹಸ್ತಾಂತರ

ಉಡುಪಿ, ಆ.20: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು...

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...
error: Content is protected !!