Tuesday, April 21, 2026
Tuesday, April 21, 2026

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ, ಮಾ.30: ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ ಸೂಕ್ತ ಸಮಯಕ್ಕೆ ರೈಲು ಹೊರಡಿಸಲಾಗಿದೆ. ಈ ಯೋಜನೆಯನ್ನು ಪ್ರಯಾಣಿಕರು ಬಳಸಬಹುದಾಗಿದೆ.
ಈ ಯೋಜನೆಯನ್ನು ಒದಗಿಸಿದ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ ಸೋಮಣ್ಣ ಅವರಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಂಸದರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!