Monday, July 27, 2026
Monday, July 27, 2026

ಹಾಲು ಉತ್ಪಾದಕರ ಒಕ್ಕೂಟ: ತರಬೇತಿ ಕಾರ್ಯಾಗಾರ

ಹಾಲು ಉತ್ಪಾದಕರ ಒಕ್ಕೂಟ: ತರಬೇತಿ ಕಾರ್ಯಾಗಾರ

Date:

ಕೋಟ, ಮಾ.31: ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ನಿರ್ದೇಶಕರುಗಳಿಗೆ ತರಬೇತಿ ಅತ್ಯಗತ್ಯ ಎಂದು ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಹೇಳಿದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಸಭಾಂಗಣದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯ ಮೈಸೂರು ತರಬೇತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಆಯ್ದ ಸಂಘಗಳ ಆಡಳಿತ ಮಂಡಳಿ ಸದಸ್ಯರ ಮೂರು ದಿನದ ತರಬೇತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅಭ್ಯಾಗತಾರಾಗಿ ದ.ಕ ಹಾಲು. ಉತ್ಪಾದಕರ ಒಕ್ಕೂಟ ನಿರ್ದೇಶಕ ಶಿವಮೂರ್ತಿ ಕೆ., ಕೋಟ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಎಚ್.ನಾಗರಾಜ್ ಹಂದೆ, ದ.ಕ. ಹಾ. ಉತ್ಪಾದಕರ ಒಕ್ಕೂಟ ವ್ಯವಸ್ಥಾಪಕ ರವಿರಾಜ್ ಉಡುಪ, ಉಪ ವ್ಯವಸ್ಥಾಪಕರಾದ ಮಾಧವ ಐತಾಳ್, ಶಂಕರ ನಾಯ್ಕ್, ಕೋಟ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ವಿಸ್ತರಣಾಧಿಕಾರಿ ಪ್ರತಿಭಾ ಉಪಸ್ಥಿತರಿದ್ದರು. ವಿವಿಧ ವ್ಯಾಪ್ತಿಯ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಈ ಕಾರ್ಯಾಗಾರದಲ್ಲಿ ಭಾಗಿಯಾದರು. ಒಕ್ಕೂಟದ ವಿಸ್ತರಣಾಧಿಕಾರಿ ಉಮೇಶ್ ಕುಂದರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!