Friday, July 24, 2026
Friday, July 24, 2026

ಕುಂದಾಪುರ: ಬೃಹತ್ ಉದ್ಯೋಗ ಮೇಳ; 1000 ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಕುಂದಾಪುರ: ಬೃಹತ್ ಉದ್ಯೋಗ ಮೇಳ; 1000 ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

Date:

ಕುಂದಾಪುರ, ಏ.2: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಕುಂದಾಪುರ ತಾಲೂಕು ಪಂಚಾಯತ್ ಹಾಗೂ ಭಂಡಾರಕರ್ಸ್ ಕಾಲೇಜು ಕುಂದಾಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಇಲ್ಲಿನ ಭಂಡಾರಕರ್ಸ್ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ಯೋಗ ಮೇಳಕ್ಕೆ ಆಗಮಿಸಿದ ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಯುವಜನತೆಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಇಂತಹ ಮೇಳಗಳು ಸಹಕಾರಿ ಎಂದು ತಿಳಿಸಿದರು.

ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್, ಉತ್ಪಾದನೆ, ಕೃಷಿ, ಐಟಿ, ಹಣಕಾಸು, ತಂತ್ರಜ್ಞಾನ ಹಾಗೂ ಕೈಗಾರಿಕೆ ಸೇರಿದಂತೆ 20 ಕ್ಕೂ ಹೆಚ್ಚು ವಿವಿಧ ವಲಯಗಳ 84 ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಪಾಲ್ಗೊಂಡಿದ್ದವು.

ಉಡುಪಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸುಮಾರು 3000 ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ವಿವಿಧ ಕಂಪನಿಗಳು ನಡೆಸಿದ ಸಂದರ್ಶನದ ಮೂಲಕ ಒಟ್ಟು 1,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!