Wednesday, July 22, 2026
Wednesday, July 22, 2026

ಅಂಗನವಾಡಿಗೆ ಸೋಲಾರ್ ದಾರಿದೀಪ; ವಾಟರ್ ಫಿಲ್ಟರ್ ಕೊಡುಗೆ

ಅಂಗನವಾಡಿಗೆ ಸೋಲಾರ್ ದಾರಿದೀಪ; ವಾಟರ್ ಫಿಲ್ಟರ್ ಕೊಡುಗೆ

Date:

ಕೋಟ, ಏ.4: ಭಾರತೀಯ ಜೀವ ವಿಮಾ ನಿಗಮ ಮೈಕ್ರೋ ಇನ್ಸೂರೆನ್ಸ್ ವಿಭಾಗ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಇವರ ಆಶ್ರಯದಲ್ಲಿ ವಿಮಾ ಗ್ರಾಮ ೨೦೨೪-೨೫ ಅಂಗವಾಗಿ ಕೋಟದ ಕಾಸನಗುಂದು ಅಂಗನವಾಡಿಗೆ ಸೋಲಾರ್ ದಾರಿದೀಪ ಹಾಗೂ ವಾಟರ್ ಫಿಲ್ಟರ್‌ನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶಬಿ ಲೋಕಾರ್ಪಣೆಗೊಳಿಸಿದರು. ಭಾರತೀಯ ಜೀವವಿಮಾ ಸಂಸ್ಥೆಯ ದಿನೇಶ್ ಪ್ರಭು ಸೋಲಾರ್ ದೀಪವನ್ನು ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್, ಕೋಟ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚಂದ್ರ ಪೂಜಾರಿ, ಲೆಕ್ಕಪರಿಶೋಧಕ ಶೇಖರ್, ಸ್ಥಳೀಯ ಕೃಷಿಕ ರಾಘವೇಂದ್ರ ಮಡಿವಾಳ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಸರೋಜ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷೆ ಸ್ಮಿತಾ ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆ ನೇತ್ರಾ, ಸಹಾಯಕಿ ಜಲಜ ಮುಂತಾದವರು ಉಪಸ್ಥಿತರಿದ್ದರು. ಯೋಜನೆಯ ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!