Friday, July 24, 2026
Friday, July 24, 2026

ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಉಡುಪಿ ನಗರಸಭೆ ಸೂಚನೆ

ಕಲುಷಿತ ನೀರನ್ನು ಚರಂಡಿಗೆ ಬಿಡದಂತೆ ಉಡುಪಿ ನಗರಸಭೆ ಸೂಚನೆ

Date:

ಉಡುಪಿ, ಏ.5: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳ ಕಲುಷಿತ ನೀರನ್ನು ಮಳೆ ನೀರು ಹರಿಯಲು ನಿರ್ಮಿಸಿರುವ ಚರಂಡಿಗೆ ಬಿಡದಂತೆ ನಗರಸಭೆಯಿಂದ ಸೂಚಿಸಲಾಗಿರುತ್ತದೆ. ಸಾರ್ವಜನಿಕರು ತಮ್ಮಲ್ಲಿ ಉತ್ಪತ್ತಿಯಾದ ಕಲುಷಿತ ನೀರನ್ನು ತಮ್ಮ ಸ್ವಂತ ಜಾಗದಲ್ಲೇ ಇಂಗುಗುಂಡಿ ನಿರ್ಮಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಿಯಮವನ್ನು ನಿರ್ಲಕ್ಷಿಸಿ ಚರಂಡಿಗೆ ಕಲುಷಿತ ನೀರು ಬಿಟ್ಟರೆ ಪುರಸಭೆ ಕಾಯಿದೆ ಅನ್ವಯ ಕ್ರಮ ಜರುಗಿಸಲಾಗುವುದು. ದಿನನಿತ್ಯ ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು, ಗಿಡಗಂಟಿಗಳ ಗೆಲ್ಲುಗಳನ್ನು ಕಡಿದು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಸೆಯುತ್ತಿರುವುದು ಕಂಡು ಬಂದಿದ್ದು, ಇದರಿಂದ ನೈರ್ಮಲ್ಯ ಹಾಗೂ ನಗರ ಸ್ವಚ್ಛತೆಗೆ ತೊಡಕಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆ, ಅಪಾರ್ಟ್ ಮೆಂಟ್, ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ತಮ್ಮ ಮನೆಯ ವಠಾರದಲ್ಲಿ ಕಾಂಪೋಸ್ಟ್ ಮಾಡಿಕೊಳ್ಳಲು ಸೂಕ್ತವಾಗಿರುತ್ತದೆ. ಈ ಬಗ್ಗೆ ಸಮಸ್ಯೆಗಳಿದ್ದಲ್ಲಿ ತ್ಯಾಜ್ಯವನ್ನು ನಗರಸಭೆಯ ತ್ಯಾಜ್ಯ ಸಂಗ್ರಹಣೆಯ ವಾಹನಕ್ಕೆ ನೀಡಬೇಕು. ಹೊರತಾಗಿ ಯಾವುದೇ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!