Thursday, July 23, 2026
Thursday, July 23, 2026

ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದಿಂದ ಸಮ್ಮಿಲನ ಕಾರ್ಯಕ್ರಮ

ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದಿಂದ ಸಮ್ಮಿಲನ ಕಾರ್ಯಕ್ರಮ

Date:

ಕುಂದಾಪುರ, ಏ.7: ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ ವಾರ್ಷಿಕ ಮಿತ್ರಕೂಟ ಸಮ್ಮಿಲನ 2026 ಕಾರ್ಯಕ್ರಮ ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ಗಂಗೊಳ್ಳಿಯ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಪ್ರಣಯ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿ, ಕಾಲೇಜು ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿರುವ ವಿದ್ಯಾರ್ಥಿಗಳಿಗೆ ನಿರಂತರ ಬೆಂಬಲ ನೀಡುತ್ತಾ ಬಂದಿದೆ. ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳ ಬದುಕು ಈ ಸಂಸ್ಥೆಗೆ ಬಂದು ಬೆಳಗಿದೆ. ಕಾಲೇಜು ಕನ್ನಡ ಕರಾವಳಿ, ಮಂಗಳೂರು ವಿಶ್ವವಿದ್ಯಾನಿಲಯ ಮಾತ್ರವಲ್ಲ, ನಾಡಿನ ಪ್ರತಿಷ್ಠಿತ ಸಂಸ್ಥೆಯಾಗಿ ಮೂಡಿ ಬಂದಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅವರು ಸಂಸ್ಥೆಯ ಶ್ರೇಯೋಭಿವೃದ್ಧಿಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಮಹತ್ವದ ಬಗ್ಗೆ ತಿಳಿಸಿದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಶ್ಯಾನುಭೋಗ್ ಪ್ರಾಸ್ತಾವಿಸಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ಶುಭ ಹಾರೈಸಿದರು. ಸಂಘದ ಕಾರ್ಯದರ್ಶಿ ದೀಪ ಪೂಜಾರಿ ಸ್ವಾಗತಿಸಿ, ಖಜಾಂಚಿ ಸಚಿನ್ ದೇವಾಡಿಗ ವಂದಿಸಿ, ರಶ್ಮಿ ಉಡುಪ ಪ್ರಾರ್ಥಿಸಿ, ಪ್ರೀತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪ್ರಾಕ್ತನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!