Friday, July 3, 2026
Friday, July 3, 2026

ಬಸ್ರೂರು: ವೃತ್ತಿ ಯೋಜನೆ ಕಾರ್ಯಕ್ರಮ

ಬಸ್ರೂರು: ವೃತ್ತಿ ಯೋಜನೆ ಕಾರ್ಯಕ್ರಮ

Date:

ಬಸ್ರೂರು, ಏ.7: ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕದ ಆಶ್ರಯದಲ್ಲಿ ‘ವೃತ್ತಿ ಯೋಜನೆ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪೋಲೀಸ್ ಉಪನಿರೀಕ್ಷಕ(ಸಿವಿಲ್)ಅಧಿಕಾರಿಯಾದ ಆಶ್ರೀತಾ ಎ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯೋಗವನ್ನು ಸರಿಯಾಗಿ ಆಯ್ಕೆ ಮಾಡಿಕೊಂಡು ಅದಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುವ ಸ್ಪರ್ಧಾತ್ಮಕ ಪರೀಕ್ಷೆಗಳು ಉದ್ಯೋಗವಕಾಶದ ಕುರಿತು ಮಾತನಾಡುತ್ತಾ ಕಾಲೇಜುಗಳಲ್ಲಿ ನಡೆಸುವ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ವೃತ್ತಿ ಯೋಜನಾ ಮುಂದಾಳತ್ವ ಬೆಳೆಸುವುದಲ್ಲದೇ ಆತ್ಮವಿಶ್ವಾಸ ಮತ್ತು ಉತ್ತಮ ನಿರ್ಧಾರಗಳನ್ನು ಕಾಲೇಜು ದಿನಗಳಲ್ಲಿಯೇ ತೆಗೆದುಕೊಂಡಾಗ ಮಾತ್ರ ಭವಿಷ್ಯದ ಯಶಸ್ಸಿಗೆ ಒಂದು ನೆಲೆ ಸಿಗುತ್ತದೆ ಎಂದರು.

ಅರುಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೂರಜ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಮೋಹನ ಕೆ. ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!