Thursday, April 9, 2026
Thursday, April 9, 2026

ಬಿ.ಬಿ. ಹೆಗ್ಡೆ ಕಾಲೇಜು: ವಿಶ್ವ ಆರೋಗ್ಯ ದಿನ

ಬಿ.ಬಿ. ಹೆಗ್ಡೆ ಕಾಲೇಜು: ವಿಶ್ವ ಆರೋಗ್ಯ ದಿನ

Date:

ಕುಂದಾಪುರ, ಏ.8: ದೈಹಿಕ ಆರೋಗ್ಯಕ್ಕೆ ಮಾನಸಿಕ ಸ್ವಾಸ್ತ್ಯ ಅಗತ್ಯ. ಒಳ್ಳೆಯ ಆರೋಗ್ಯಕ್ಕೆ ಸಂತೋಲನ ಆಹಾರ, ಪೌಷ್ಟಿಕ ಆಹಾರ, ಸಕ್ಕರೆಯ ಮಿತವಾದ ಬಳಕೆ ಅತ್ಯಂತ ಅವಶ್ಯಕ. ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇಲ್ಲಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಶಿಶು ತಜ್ಞರಾದ ಡಾ. ಮಾಧವ ಪೈ ಕೆ. ತಿಳಿಸಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2 ರ ಆಶ್ರಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂಸೇವಕರರಾದ ಶ್ರೇಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿಶಾ ಶೆಟ್ಟಿ ಸ್ವಾಗತಿಸಿ, ಸುಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಪಲ್ಲವಿ ಪ್ರಾರ್ಥಿಸಿ, ದೀಪಿಕಾ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಪೊ ದರವನ್ನು ಯಥಾಸ್ಥಿತಿಯಲ್ಲಿರಿಸಿದ ಆರ್‌ಬಿಐ

ಮುಂಬಯಿ, ಏ.8: ಭಾರತೀಯ ರಿಸರ್ವ್ ಬ್ಯಾಂಕ್ ಬಡ್ಡಿದರಗಳನ್ನು ಶೇ. 5.25 ರಲ್ಲಿಯೇ...

ಮಣಿಪಾಲ: ವಿಶ್ವ ಆರೋಗ್ಯ ದಿನ

ಮಣಿಪಾಲ, ಏ.8: ವಿಶ್ವ ಆರೋಗ್ಯ ದಿನದ ಸಂದರ್ಭದಲ್ಲಿ, ಏಪ್ರಿಲ್ 8 ರಂದು...

ಉಪ ಲೋಕಾಯುಕ್ತರ ದಿಢೀರ್ ಭೇಟಿ: 17 ಸ್ವಯಂ ಪ್ರೇರಿತ ಪ್ರಕರಣಗಳ ದಾಖಲು

ಉಡುಪಿ, ಏ.8: ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು...

ಮೂವತ್ತು ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದ ಶ್ರೀಲಂಕಾ

ಚೆನ್ನೈ, ಏ.8: ಶ್ರೀಲಂಕಾದ ಜೈಲುಗಳಿಂದ ಬಿಡುಗಡೆಯಾದ ಮೂವತ್ತು ಭಾರತೀಯ ಮೀನುಗಾರರು ಚೆನ್ನೈಗೆ...
error: Content is protected !!