Thursday, July 23, 2026
Thursday, July 23, 2026

ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌

ದಮನಿತರ ಪಾಲಿನ ಬಿಡುಗಡೆಯ ಬೆಳಕು ಅಂಬೇಡ್ಕರ್‌

Date:

ಹಿರಿಯಡಕ, ಏ.15: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ದನಿಗಳನ್ನು ಕೂಡಿಕೊಂಡು ತನ್ನ ಓದು, ವಿವೇಕ, ಕರುಣೆಯ ಜೀವದ್ರವವನ್ನು ಬಳಸಿ ಈ ನೆಲದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ಕೊಟ್ಟ ಮಹಾಮಾನವತಾವಾದಿ ಭೀಮರಾವ್‌ ಅಂಬೇಡ್ಕರ್‌ ಅವರ ಜನ್ಮದಿನ ದಮನಿತರ ಪಾಲಿನ ಬಿಡುಗಡೆಯ ದಿನವೂ ಹೌದು ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಹೇಳಿದರು. ಇವರು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 135ನೇ ಜನ್ಮದಿನದ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

ಸೊರಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಗಿರಿಜಮ್ಮ, ಹೊನ್ನಾಳಿ ವಿಜಯ ಪದವಿಪೂರ್ವ ಕಾಲೇಜಿನ ವಸಂತ್‌, ಅರುಣ್‌ ಹಾಗೂ ಇತರರ ಜೊತೆ ಕಾಲೇಜಿನ ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಈರಬಸು ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಸಿತೀಕ್ಷಾ ವಂದಿಸಿದರು. ಆಂಗ್ಲ ವಿಭಾಗದ ಮುಖ್ಯಸ್ಥೆ ನಿಶ್ಚಿತ ಎಸ್‌ ಹೋಬಳಿದಾರ್‌ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!