Thursday, April 23, 2026
Thursday, April 23, 2026

ಯಕ್ಷಕಲಾರಾಧನೆ ಅರ್ಥಪೂರ್ಣ: ಪ್ರದೀಪ್ ಕುಮಾರ್ ಕಲ್ಕೂರ

ಯಕ್ಷಕಲಾರಾಧನೆ ಅರ್ಥಪೂರ್ಣ: ಪ್ರದೀಪ್ ಕುಮಾರ್ ಕಲ್ಕೂರ

Date:

ಕೋಟ, ಏ.17: ಯುಗಾದಿ ಉತ್ಸವವನ್ನು ಕೇಂದ್ರೀಕರಿಸಿಕೊಂಡು ಯಕ್ಷಕಲಾರಾಧನೆ ಅರ್ಥಪೂರ್ಣ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ಬುಧವಾರ ಕಾರ್ಕಡ ಭೂಮಿಕ ಸಮೀಪ ಸೌರಮಾನ ಯುಗಾದಿ ಯಕ್ಷಗಾನ ಶೀರ್ಷಿಕೆಯಡಿ ಕೋಟ ಸಾಲಿಗ್ರಾಮ ಹದಿನಾಲ್ಕು ಗ್ರಾಮಗಳ ಯಕ್ಷಗಾನ ಕಲಾಭಿಮಾನಿಗಳ ನೇತೃತ್ವದಲ್ಲಿ ಶ್ರೀ ಅನಂತಪದ್ಮನಾಭ ದಶಾವತಾರ ಯಕ್ಷಗಾನ ಮಂಡಳಿ ಪೆರ್ಡೂರು ಇವರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕಲಾರಾಧಕರನ್ನು ಅಭಿನಂದಿಸಿ ಅವರು ಮಾತನಾಡಿದರು.

ಯಕ್ಷಾಭಿಮಾನಿಗಳಾದ ರಾಘವೇಂದ್ರ ಮಧ್ಯಸ್ಥ ಪಾರಂಪಳ್ಳಿ, ಆನಂದ್ ಆಚಾರ್, ಎಚ್ ನಾಗರಾಜ್ ಹಂದೆ, ಗಣೇಶ್ ಕಿಣಿ, ಶ್ರೀಕಾಂತ್ ಐತಾಳ್, ರಮೇಶ್ ಭಂಡಾರಿ, ಸಿ.ಸೂರ್ಯನಾರಾಣ ಮಯ್ಯ, ಕೆ.ನಾಗರಾಜ ಸೋಮಯಾಜಿ ಮುಂತಾದವರನ್ನು ಅಭಿನಂದಿಸಲಾಯಿತು. ಇಂದ್ರಪ್ರಸ್ಥ ಪ್ರಕಾಶ್ ಮಯ್ಯ ಹರ್ತಟ್ಟು ದಂಪತಿ, ಕೆ.ತಾರಾನಾಥ ಹೊಳ್ಳ ದಂಪತಿಗಳನ್ನು ಸನ್ಮಾನಿಸಲಾಯಿತು. ವಿಶ್ವವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಎಚ್ ಸುಜಯೀಂದ್ರ ಹಂದೆ ಅಭಿನಂದನಾ ನುಡಿ ಗಳನ್ನಾಡಿದರು. ಮಾಧುರಿ ಶ್ರೀರಾಮ್ ನಿರೂಪಿಸಿದರು. ಯಕ್ಷಾರಾಧಕ ಎಚ್ ಜನಾರ್ದನ ಹಂದೆ ವಂದಿಸಿದರು. ನಂತರ ಚಂದ್ರಹಾಸ ಚರಿತ್ರೆ ರತಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು. ಗೆಳೆಯರ ಬಳಗ ಕಾರ್ಕಡ, ಕರ್ನಾಟಕ ಯಕ್ಷಧಾಮ ಮಂಗಳೂರು ಸಹಕಾರ ನೀಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!