Tuesday, July 28, 2026
Tuesday, July 28, 2026

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ; ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ; ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಏ.19: ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ರಾಜ್ಯದಾದ್ಯಂತ ಪರವಾನಿಗೆ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಗಳು ಉಂಟಾಗಿವೆ. ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, ಮನೆ ನಿರ್ಮಾಣಕ್ಕೆ ಸಾಲ ಪಡೆಯುವವರು ಹಾಗೂ ಸಾಮಾನ್ಯ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯದಾದ್ಯಂತ ಸುಮಾರು 6,000 ಪರವಾನಿಗೆ ಭೂಮಾಪಕರು, ಉಡುಪಿ ಜಿಲ್ಲೆಯಲ್ಲಿ 118 ಮಂದಿ ಹಾಗೂ ಉಡುಪಿ ತಾಲೂಕಿನಲ್ಲಿ 22 ಮುಷ್ಕರದಲ್ಲಿ ನಿರತರಾಗಿದ್ದಾರೆ. ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಭೂಮಾಪನ ಅರ್ಜಿಗಳ ವಿಲೇವಾರಿ ಬಾಕಿ ಇದ್ದು ವಿಶೇಷವಾಗಿ ಉಡುಪಿ ತಾಲೂಕಿನಲ್ಲಿ 350ಕ್ಕೂ ಅಧಿಕ ಭೂಮಾಪನ ಅರ್ಜಿಗಳು ಬಾಕಿ ಯಾಗಿದೆ. ರೈತರು, ಜಮೀನು ಖರೀದಿ/ಮಾರಾಟ ಮಾಡುವವರು, ವಾರಸುದಾರಿಕೆ ದಾಖಲೆ ಮಾಡಿಸಿಕೊಳ್ಳುವವರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಆರ್ಥಿಕ ಮತ್ತು ಆಡಳಿತಾತ್ಮಕ ತೊಂದರೆ ಅನುಭವಿಸುತ್ತಿದ್ದಾರೆ.

ಆದುದರಿಂದ, ಈ ಗಂಭೀರ ಸಮಸ್ಯೆಯನ್ನು ತಕ್ಷಣ ಪರಿಗಣಿಸಿ ಪರವಾನಿಗೆ ಭೂಮಾಪಕರೊಂದಿಗೆ ಮಾತುಕತೆ ನಡೆಸಿ, ಸದ್ರಿಯವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸಿ, ಮುಷ್ಕರವನ್ನು ಶೀಘ್ರ ಅಂತ್ಯಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೆಯೇ ಸಾರ್ವಜನಿಕ ಹಿತದೃಷ್ಟಿಯಿಂದ ಭೂಮಾಪನ ಸೇವೆಗಳು ಮರುಪ್ರಾರಂಭವಾಗುವಂತೆ ತುರ್ತು ಮಧ್ಯಪ್ರವೇಶ ಮಾಡಿ ಜನರ ಸಂಕಷ್ಟ ನಿವಾರಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!