Wednesday, July 29, 2026
Wednesday, July 29, 2026

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

Date:

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 1 ಕೋಟಿ 30 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

1 ಕೋಟಿ ವೆಚ್ಚದ ಓಂತಿಬೆಟ್ಟು- ಕೊಡಿಬೆಟ್ಟು – ಹಂಗಾರಕಟ್ಟೆ – ವರ್ವಾಡಿ ರಸ್ತೆಯನ್ನು ಉದ್ಘಾಟಿಸಿ ಪೆರ್ಣಂಕಿಲ ಅಂಗಾರಕಟ್ಟೆ ಹರಿಶ್ಚಂದ್ರ ಅಚಾರ್ಯ ಮನೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ಅಂಜಾರು ಗ್ರಾಮ ಹೊಳೆಪಡ್ಪುಗೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ಕಾಜಾರಾಗುತ್ತು ಶ್ರೀನಿವಾಸ ನಗರ 5 ಸೆಂಟ್ಸ್ ರಸ್ತೆ – 10 ಲಕ್ಷ ಸೇರಿದಂತೆ ಒಟ್ಟು 30 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್ ಮಡಿವಾಳ ಮಾಜಿ ಸದಸ್ಯರಾದ ಅರುಣ್ ಶೆಟ್ಟಿ, ಹೆನ್ರಿ ಫರ್ನಾಂಡಿಸ್, ಜಗದೀಶ್ ಶೆಟ್ಟಿ, ರೇವತಿ ಆಚಾರ್ಯ, ವಿಜಯಲಕ್ಷ್ಮೀ, ಸ್ಥಳೀಯರಾದ ಹರಿಶ್ಚಂದ್ರ ಆಚಾರ್ಯ, ಶಶಿಕಾಂತ್ ಆಚಾರ್ಯ, ರವಿರಾಜ್ ಆಚಾರ್ಯ, ರಾಜ್ ಕುಮಾರ್ ಬೋವಿ, ರಾಜೇಶ್ ಆಚಾರ್ಯ, ಪ್ರಕಾಶ್ ಆಚಾರ್ಯ, ಗಿರೀಶ್ ನಾಯ್ಕ್, ಅನಿಲ್ ಶೆಟ್ಟಿ, ನಿತೀಶ್ ಶೆಟ್ಟಿ, ಕೃಷ್ಣ ನಾಯ್ಕ್, ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!