ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ ಅವರ ಮನವಿಯ ಮೇರೆಗೆ ಉಡುಪಿಯ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಿದ ರೂ. 2 ಲಕ್ಷ ಮೌಲ್ಯದ ಎರಡು ಹವಾನಿಯಂತ್ರಕಗಳನ್ನು ಜಿಲ್ಲಾಸ್ಪತ್ರೆಗೆ ಶಾಸಕ ಯಶ್ಪಾಲ್ ಸುವರ್ಣ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಉಡುಪಿ ಜಿಲ್ಲಾಸ್ಪತ್ರೆಗೆ ಅತೀ ಅಗತ್ಯವಾಗಿದ್ದ ಹವಾನಿಯಂತ್ರಕವನ್ನು ತಕ್ಷಣ ಒದಗಿಸಿದ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಮಂಡಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕರು ತಿಳಿಸಿದರು. ಸಂಸ್ಥೆಯ ಪ್ರತಿನಿಧಿಯಾದ ಜಿ. ರಾಘವೇಂದ್ರ ಭಟ್, ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್, ವೈದ್ಯರಾದ ಡಾ. ಸಾಗರ್ ಭಟ್ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.




By
ForthFocus™