Friday, July 24, 2026
Friday, July 24, 2026

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

Date:

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದರ ಬಗ್ಗೆ ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಇಒ ಹರ್ಷ ಪೂಜಾರಿ ಬೇಸರ ವ್ಯಕ್ತಪಡಿಸಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇವರ ಸಂಯೋಜನೆಯೊಂದಿಗೆ 299ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು. ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ ಎಂದರು.

ಪಂಚವರ್ಣ ಯುವಕ‌ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಟ್ರಾವೆಲಿಂಕ್ಸ್ ಫ್ರೆಂಡ್ಸ್ ನ ನಾಗರಾಜ್ ಅಮೀನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!