Wednesday, April 22, 2026
Wednesday, April 22, 2026

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 3 ಮಂದಿ ವಿದ್ಯಾರ್ಥಿಗಳು 99 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.5970242 ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ. ಬಸವರೆಡ್ಡಿ ವಿಷ್ಣುರೆಡ್ಡಿ – 98.9823753 ತೇಜಸ್ ಆರ್. ಬಿ.- 98.9615457 ನಿನಾದ್ ರಾಜೇಶ್ ನಾಯ್ಕ್- 98.946358 ಧನುಷ್ ಹೆಚ್. ಎ.- 98.863449 ಸಂವಿತ್‌ ಅಮಿತ್ ಗೋಕರ್ಣ- 98.5729919 ದೃಶ್ಯ್‌- 98.4130581 ಸುಕ್ಷಿತ್ ಗಿರೀಶ್ ಗೌಡ- 98.3503888 ತೇಜಸ್ ಎನ್. ಇ. – 98.3454350 ತೇಜಸ್ ಹೆಗಡೆ ಎಚ್. ಡಿ.-98.1925416 ಅಕ್ಷತಾ ಮೋಹನ್ ಹೆಗಡೆ -98.168271 ಪ್ರಜ್ವಲ್ ಭಟ್- 98.0498968 ವಿಶ್ವೇಶ್ ಎನ್. ಎಚ್.98.0348799 ಪರ್ಸೆಂಟೈಲ್ ಗಳನ್ನು ಪಡೆದುಕೊಂಡಿದ್ದಾರೆ.

99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 15ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 51 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 114 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ. ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಂಶುಪಾಲರು,ಆಡಳಿತ ಮಂಡಳಿ, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಜೆಇಇ ಪರೀಕ್ಷೆಯ ಸಂಯೋಜಕರಾದ ಶ್ರೀ ನಂದೀಶ್ ಅಭಿನಂದಿಸಿ ಮುಂದಿನ ಹಂತದ ಪರೀಕ್ಷೆಗೆ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಫೋರ್ಥ್‌ಫೋಕಸ್‌ಗೆ ವರ್ಡ್‌ಪ್ರೆಸ್.ಕಾಂ ಮತ್ತು ವೂ ಪಾಲುದಾರ ಮಾನ್ಯತೆ

ಉಡುಪಿ, ಏ.21: ಜಾಲತಾಣ ನಿರ್ಮಾಣ, ವರ್ಡ್‌ಪ್ರೆಸ್ ಅಭಿವೃದ್ಧಿ ಮತ್ತು ಆನ್‌ಲೈನ್ ವಾಣಿಜ್ಯ...

ಹೀರೆಬೆಟ್ಟು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭಟ್ರಕೋಡಿ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಹೀರೆಬೆಟ್ಟು, ಏ.21: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭಟ್ರಕೋಡಿ ಹೀರೆಬೆಟ್ಟು ಇದರ ಜೀರ್ಣೋದ್ಧಾರ...

ಏ. 23: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಏ.21: ನಗರದ ಕುಂಜಿಬೆಟ್ಟು ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ...
error: Content is protected !!