ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪೂರ್ಣಪ್ರಜ್ಞಾ ಕಾಲೇಜಿನ ಪ್ರಾಧ್ಯಾಪಕರಾದ ರಾವ್ ಹರ್ಷಲ್ ದೇವರಾಜ್ ಇವರು ಇಂದಿನ ಕಾಲದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಹಳ ಮುಖ್ಯವಾಗಿದ್ದು, ಅದಕ್ಕೆ ಬೇಕಾದ ಸರಿಯಾದ ಯೋಜನೆ ಮತ್ತು ಕಠಿಣ ಪರಿಶ್ರಮ ಅಗತ್ಯ ಅದಕ್ಕಾಗಿ ವಿದ್ಯಾರ್ಥಿಗಳು ಸರಿಯಾದ ಗುರಿಯನ್ನು ನಿಗದಿಪಡಿಸಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಆಡಳಿತಾಧಿಕಾರಿಯಾದ ಡಾ. ಮೋಹನ ಕೆ.ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಮುರುಳಿಧರ ಹೆಗ್ಡೆ ಸ್ವಾಗತಿಸಿ, ವಿದ್ಯಾರ್ಥಿನಿ ವಿಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಭೂಮಿಕಾ ವಂದಿಸಿದರು.




By
ForthFocus™