Wednesday, April 29, 2026
Wednesday, April 29, 2026

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ; ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ; ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ

Date:

ಉಡುಪಿ, ಏ.23: ಇಂದು ಪ್ರಕಟಗೊಂಡ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದಿರುವುದು ಸಂತೋಷದ ವಿಷಯವಾಗಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ಅವರು ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಇವರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ನನ್ನ ವೈಯಕ್ತಿಕ ಅಭಿನಂದನೆಗಳು ಎಂದು ಉಡುಪಿ ಜಿಲ್ಲಾಧಿಕಾರಿ ಹೇಳಿದ್ದಾರೆ.

ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ, ಮುಖ್ಯವಾಗಿ ಇಲ್ಲಿನ ಬೋಧಕರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವಹಿಸಿರುವ ನಿರ್ಣಾಯಕ ಪಾತ್ರ ಮತ್ತು ಎಲ್ಲಾ ಅಧಿಕಾರಿ ಸಿಬ್ಬಂಧಿಗಳ ಕಾರ್ಯತತ್ಪರತೆ ಶ್ಲಾಘನೀಯ. ಶೈಕ್ಷಣಿಕವಾಗಿ ಜಿಲ್ಲೆಯ ಗರಿಮೆಯನ್ನು ಹೆಚ್ಚಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ತುಂಬು ಹೃದಯದ ಅಭಿನಂದನೆಗಳು. ಇದರೊಂದಿಗೆ 625 ಕ್ಕೆ 624 ಅಂಕ ಪಡೆದ ವಿದ್ಯಾರ್ಥಿಗಳಾದ ಕುಂದಾಪುರದ ಶ್ರೀ ವೆಂಕಟ್‌ರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಅನ್ವರ್ಥ್ ಪೂಜಾರಿ, ಕಾರ್ಕಳ ತಾಲೂಕು ಬೈಲೂರು ಸರಕಾರಿ ಜೂನಿಯರ್ ಕಾಲೇಜಿನ ಲಿಸಾ ಬಾರ್ಬೋಝಾ, ಕಾರ್ಕಳ ಕುಕ್ಕುಂದೂರು ಗಣಿತ್ ನಗರದ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವಿದ್ಯಾರ್ಥಿಗಳಾದ ಮಹಾಲಕ್ಷ್ಮೀ ಭಾಗವ್ ಹಾಗೂ ಮಹಾಲಕ್ಷ್ಮೀ ಪೈ ಬಿ, ಕೋಟ ವಿವೇಕ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಚೈತನ್ಯಶ್ರೀ ಆರ್ ಉಡುಪ, 625 ಕ್ಕೆ 623 ಅಂಕ ಪಡೆದ ಕುಂದಾಪುರದ ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಪ್ರಾರ್ಥನಾ ಜಿ, ಸಾತ್ವಿಕ್ ಎಸ್ ಭಟ್, ಥಕ್ಷಾ ಪಿ. ಶೆಟ್ಟಿ ಹಾಗೂ ಕಾರ್ಕಳ ಕುಕ್ಕುಂದೂರು ಗಣಿತ್ ನಗರದ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ವೈಷ್ಣವಿ ಶೆಟ್ಟಿಗಾರ್ ಮತ್ತು 625 ಕ್ಕೆ 622 ಅಂಕ ಪಡೆದ ಕೋಟ ವಿವೇಕ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್‌ನ ಸಂಕಲ್ಪ್ ಕುಮಾರ್ ಇವರಿಗೂ ಜಿಲ್ಲಾಡಳಿತ ಅಭಿನಂದಿಸಿದೆ. ಜಿಲ್ಲೆಯಲ್ಲಿ ಒಟ್ಟು 13,373 ರೆಗ್ಯೂಲರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 13,129 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆಯು ಶೇ. 98.18 ರಷ್ಟು ಫಲಿತಾಂಶ ದಾಖಲಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಉಡುಪಿ, ಏ.29: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ...

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್...

ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್

ಉಡುಪಿ, ಏ.28: 2016 ರಲ್ಲಿ ಸಣ್ಣ ಆವರಣದಲ್ಲಿ ಹಿಂಜರಿಕೆಯೊಂದಿಗೆ ಆರಂಭವಾದ ಭಾರತೀಯ...

ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ

ಉಡುಪಿ, ಏ.28: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ...
error: Content is protected !!