Monday, April 27, 2026
Monday, April 27, 2026

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

Date:

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ ಮೂಡುಸಗ್ರಿಯಲ್ಲಿ ಸುಮಾರು 51 ಜಾತಿಯ ವಿವಿಧ ಗಿಡಗಳನ್ನು ಜೀರ್ಣೋದ್ಧಾರಗೊಳ್ಳುತ್ತಿರುವ ನಾಗಬನದಲ್ಲಿ ನಾಗಬ್ರಹ್ಮ ಅಭಿವೃದ್ಧಿ ಸಮಿತಿ ವತಿಯಿಂದ ನಮ್ಮ ಮನೆ ನಮ್ಮ ಮರ ತಂಡದ ಸಹಕಾರದೊಂದಿಗೆ ನೆಡಲಾಯಿತು.

ಇತ್ತೀಚಿಗಿನ ದಿನಗಳಲ್ಲಿ ಕಾಂಕ್ರೀಟೀಕರಣಗೊಳ್ಳುತ್ತಿರುವ ನಾಗಬನಗಳ ಮಧ್ಯೆ ಈ ವಿಶೇಷ ನಾಗಬನ ಎಲ್ಲರಿಗೂ ಮಾದರಿಯಾಗಿದೆ. ಈ ರೀತಿಯ ವಿನೂತನ ಮಾದರಿ ಕಾರ್ಯಕ್ರಮ ಸಂಯೋಜಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಖ್ಯಾತ ಉರಗತಜ್ಞ ಗುರುರಾಜ್ ಸನಿಲ್ ಹೇಳಿದರು.

ಸಮಿತಿಯ ಅಧ್ಯಕ್ಷ ವಿಷ್ಣುಪ್ರಸಾದ್ ತೆಂಕಿಲ್ಲಾಯ, ಶ್ರೀನಿವಾಸ, ಸಮಿತಿಯ ಪದಾಧಿಕಾರಿಗಳು, ವಿಜಯ್ ಕೊಡವೂರು, ಕಸಾಪ ಉಡುಪಿ ತಾಲೂಕು ರವಿರಾಜ್ ಹೆಚ್.ಪಿ., ಜನಾರ್ದನ್ ಕೊಡವೂರು, ಮಂಜುಳಾ ಪ್ರಸಾದ್, ಸಂದೀಪ್ ಮಂಜ, ಕಾವ್ಯವಾಣಿ ಕೊಡಗು, ಉದಯ ನಾಯ್ಕ್, ರಾಘವೇಂದ್ರ ಕರ್ವಾಲು ಮುಂತಾದವರು ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ

ಬ್ರಹ್ಮಾವರ, ಏ.26: ನಾಲ್ಕೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಮಿತ ಇವರು ಎಸ್.ಎಸ್.ಎಲ್.ಸಿಯಲ್ಲಿ...

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಉಡುಪಿ, ಏ.26: ಉಡುಪಿ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡದಲ್ಲಿ...

ಶಿಬಿರಗಳಿಂದ ವ್ಯಕ್ತಿತ್ವ ವಿಕಸನ

ಕೋಟ, ಏ.26: ಬೇಸಿಗೆ ಶಿಬಿರಗಳು ವಿದ್ಯಾರ್ಥಿಗಳ ವಿಕಸನ ಮಾಡುವಲ್ಲಿ ತುಂಬಾ ಸಹಕಾರಿಯಾಗಿರುವಂತದ್ದು,...

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...
error: Content is protected !!