Thursday, April 30, 2026
Thursday, April 30, 2026

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

Date:

ತ್ರಾಸಿ, ಏ.29: ಪ್ರವಾಸಕ್ಕೆ ಹೊರಟಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತ್ರಾಸಿ ಬಳಿ ಬುಧವಾರ ನಡೆದಿದೆ. ಶಿವಮೊಗ್ಗದ ಕಾಲೇಜೊಂದರ ಕಾಲೇಜು ವಿದ್ಯಾರ್ಥಿಗಳು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಢಿಕ್ಕಿ ಹೊಡೆದು ಬಸ್ ಅಲ್ಲೇ ಬದಿಯಲ್ಲಿದ್ದ ಲಾರಿಗೂ ಢಿಕ್ಕಿಯಾಯಿತು ಎನ್ನಲಾಗಿದೆ. ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ಕುಂದಾಪುರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಪರಿಶೀಲನೆ ನಡೆಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಉಡುಪಿ, ಏ.29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

ಕಾಪು, ಏ.29: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಪಡುಬಿದ್ರಿ ಶ್ರೀ...

ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

ಮಲ್ಪೆ, ಏ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...
error: Content is protected !!