Friday, May 1, 2026
Friday, May 1, 2026

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ‍್ಯಾಂಕ್; ಮಣಿಪಾಲ ಜ್ಞಾನಸುಧಾದ ಅಶ್ವಿನ್‌ಗೆ ರಾಜ್ಯಕ್ಕೆ ಮೂರನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ‍್ಯಾಂಕ್; ಮಣಿಪಾಲ ಜ್ಞಾನಸುಧಾದ ಅಶ್ವಿನ್‌ಗೆ ರಾಜ್ಯಕ್ಕೆ ಮೂರನೇ ರ‍್ಯಾಂಕ್

Date:

ಉಡುಪಿ, ಏ.30: ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಶ್ವಿನ್ ವಿ ಶೆಟ್ಟಿ 597 ಅಂಕದೊಂದಿಗೆ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಈಗಾಗಲೇ ಪ್ರಕಟಗೊಂಡ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾದ ವೈಷ್ಣವಿ ಕುಲಕರ್ಣಿ, ಚೈತ್ರಿಕ ಚೌದರಿ ಹಾಗೂ ಉಡುಪಿ ಜ್ಞಾನಸುಧಾದ ಆರ್ನವಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಪಡೆದಿದ್ದು ಒಟ್ಟು ಜ್ಞಾನಸುಧಾದ ನಾಲ್ಕು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಂತಾಗಿದೆ.

ಮರು ಮೌಲ್ಯಮಾಪನದ ಬಳಿಕ ಒಟ್ಟು ಜ್ಞಾನಸುಧಾ 59 ವಿದ್ಯಾರ್ಥಿಗಳು ರಾಜ್ಯಕ್ಕೆ ಅಗ್ರ ಹತ್ತರ ಒಳಗಿನ ರ‍್ಯಾಂಕ್ ಪಡೆದಿದ್ದಾರೆ. ಕಾರ್ಕಳ ಜ್ಞಾನಸುಧಾ, ಉಡುಪಿ ಜ್ಞಾನಸುಧಾ ಹಾಗೂ ಮಣಿಪಾಲ ಜ್ಞಾನಸುಧಾವು ಶೇ.100 ಫಲಿತಾಂಶವನ್ನು ಪಡೆದಿದ್ದು, ಒಟ್ಟು 966 ವಿದ್ಯಾರ್ಥಿಗಳಲ್ಲಿ 889(92%) ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ.

ಅಜೆಕಾರ್ ಪದ್ಮಗೋಪಲ್ ಎಜುಕೇಶನ್ ಟ್ರಸ್ಟ್ನ ಮೂರನೇ ಅಂಗ ಸಂಸ್ಥೆಯಾದ ಮಣಿಪಾಲ ಜ್ಞಾನಸುಧಾದಲ್ಲಿಯೂ ರ‍್ಯಾಂಕ್ ಪಡೆದಿರುವುದು ಸಂತಸವಾಗಿದೆ ಎಂದು ಅಜೆಕಾರ್ ಪದ್ಮಗೋಪಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ವಸಹಾಯ ಗುಂಪುಗಳ ಉಳಿತಾಯ ಖಾತೆ ಪ್ರಾರಂಭಕ್ಕೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸಿದ್ಧತೆ

ನವದೆಹಲಿ, ಏ.30: ಭಾರತದ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ತನ್ನ ಸ್ವಸಹಾಯ...

ಆನ್‌ಲೈನ್ ಗೇಮಿಂಗ್ ನಿಯಮ ನಾಳೆಯಿಂದ ಜಾರಿಗೆ

ನವದೆಹಲಿ, ಏ.30: ವೇಗವಾಗಿ ವಿಸ್ತರಿಸುತ್ತಿರುವ ಆನ್‌ಲೈನ್ ಗೇಮಿಂಗ್ ವಲಯವನ್ನು ನಿಯಂತ್ರಿಸುವಲ್ಲಿ ಮಹತ್ವದ...

ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನ ರಥೋತ್ಸವ: ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ

ಉಡುಪಿ, ಏ.30: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ...

ಮಹಿಳಾ ಸಬಲೀಕರಣ ಕೋಶ ಉದ್ಘಾಟನೆ

ಉಡುಪಿ, ಏ.30: ಮಹಿಳಾ ಆರೋಗ್ಯ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮದ ಕುರಿತು ಜಾಗೃತಿ...
error: Content is protected !!