ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಮೇ 3 ಭಾನುವಾರ ನಡೆಯಲಿರುವ ರಾಜ್ಯಮಟ್ಟದ ಕಡಲತೀರ ಚಾರಣ, ಪ್ರಕೃತಿ ಅಧ್ಯಯನ ಹಾಗೂ ಸ್ವಚ್ಛತಾ ಶಿಬಿರದ ತಯಾರಿಗಳನ್ನು ಪರಿಶೀಲಿಸುವ ಸಲುವಾಗಿ ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಶನಿವಾರ ಸಂಜೆ ಭೇಟಿ ನೀಡಿದರು. ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವಕರ್ ಅವರು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.
ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಸುಮನ್ ಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ಶಿಬಿರ ನಾಯಕ ಮರ್ವಿನ್ ಡಿಸೋಜಾ, ಐಕ್ಯೂಎಸಿ ಸಂಯೋಜಕ ಡಾ. ವಿಷ್ಣುಮೂರ್ತಿ ಪ್ರಭು, ಗಣಕವಿಜ್ಞಾನದ ಪ್ರಾಧ್ಯಾಪಕ ರಾಜಕುಮಾರ್ ಮುಂತಾದವರು ಉಪಸ್ಥಿತರಿದ್ದರು.




By
ForthFocus™