ಉಡುಪಿ, ಮೇ.4: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://kanakadasaresearchcenter.karnataka.gov.in/ ಅಥವಾ ಮೊ.ನಂ: 9743545865 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ
ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ
Date:




By
ForthFocus™