Friday, July 24, 2026
Friday, July 24, 2026

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

Date:

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ ಓದುವುದರ ಮೂಲಕ ಶಿಕ್ಷಣದಲ್ಲಿ ಯಶಸ್ಸನ್ನು ಪಡೆಯಬಹುದು. ಅವರು ಕಿರಿಯರಿಗೆ ಮಾದರಿಯಾಗಿ ಬೆಳೆಯಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಪಾಂಡುರಂಗ ಪೈ ಸಿದ್ದಾಪುರ ಅವರು ಅಭಿಪ್ರಾಯಪಟ್ಟರು. ಅವರು ಡ್ಯುಯಲ್ ಸ್ಟಾರ್ ಎಜುಕೇಶನ್ ಇನ್ಸ್ಟಿಟ್ಯೂಷನ್ ಅಮಾಸೆಬೈಲು ಇಲ್ಲಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 614 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುವ ಪೃತ್ವಿಕ್ ಶೇಖರ್ ಪೂಜಾರಿ ಅವರ ಮನೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಅಂಗಳ – 2026 ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಉಪಾಧ್ಯಕ್ಷರಾದ ವಡ್ದರ್ಸೆ ಪ್ರಕಾಶ್ ಆಚಾರ್ಯ, ಪೋಷಕರಾದ ಶೇಖರ್ ಪೂಜಾರಿ, ವಸಂತಿ ಪೂಜಾರಿ, ರಾಮ ಪೂಜಾರಿ, ಮೋಹನ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ ಶೆಟ್ಟಿ ಮಠದಜಡ್ಡು ಉಪಸ್ಥಿತರಿದ್ದರು. ವಡ್ಡರ್ಸೆ ಪ್ರಕಾಶ್ ಆಚಾರ್ಯ ಸ್ವಾಗತಿಸಿದರು, ಶಿಕ್ಷಕ ವಿಘ್ನೇಶ್ ಜಿ ಎಲ್ ಸನ್ಮಾನ ಪತ್ರ ವಾಚಿಸಿದರು, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಕಾರ್ಯದರ್ಶಿ ಮಹೇಶ್ ಹೈಕಾಡಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!