Friday, June 5, 2026
Friday, June 5, 2026

ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವುದು ಬೇಸಿಗೆ ಶಿಬಿರಗಳ ಉದ್ದೇಶವಾಗಲಿ: ಪ್ರೇಮಾನಂದ ಶೆಟ್ಟಿ

ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವುದು ಬೇಸಿಗೆ ಶಿಬಿರಗಳ ಉದ್ದೇಶವಾಗಲಿ: ಪ್ರೇಮಾನಂದ ಶೆಟ್ಟಿ

Date:

ಕೋಟ, ಮೇ 9: ಬೇಸಿಗೆ ಶಿಬಿರಗಳು ಕೇವಲ ರಜಾ ಶಿಬಿರಗಳಾಗದೆ ಮಕ್ಕಳ ಮನೋವಿಕಾಸದ ಜೊತೆ ಅವರನ್ನು ಸುಸಂಸ್ಕೃತರನ್ನಾಗಿಸಲಿ ಎಂದು ಸಮಾಜ ಸೇವಕ ಕಟ್ಕೇರೆ ಪ್ರೇಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಶನಿವಾರ ಕೋಟ ಪಂಚಾಯತ್ ಸಭಾಂಗಣದಲ್ಲಿ ಕೋಟ ಗ್ರಾಮ ಪಂಚಾಯತ್, ಅರಿವು ಡಿಜಿಟಲ್ ಗ್ರಂಥಾಲಯ ಕೇಂದ್ರ ಕೋಟ, ಪಂಚವರ್ಣ ಸಂಘಟನೆ ಕೋಟ, ಇಂಡಿಕಾ ಕಲಾ ಬಳಗ ಪಡುಕರೆ, ಪ್ರಕೃತಿ ಸಂಜೀವಿನಿ ಸಂಘ ಕೋಟ ಪಂಚಾಯತ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಐದು ದಿನಗಳಲ್ಲಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಾಗರತ್ನ ಉಡುಪ, ಜಯಲಕ್ಷ್ಮೀ, ವಸಂತಿ, ಪ್ರಜ್ಞಾ ಹಂದಟ್ಟು ಇವರುಗಳನ್ನು ಗೌರವಿಸಲಾಯಿತು. ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪ್ರಕೃತಿ ಸಂಜೀವಿನಿ ಸಂಘದ ಮಾಲತಿ ಶೇಖರ್ ಉಪಸ್ಥಿತರಿದ್ದರು. ಅರಿವು ಡಿಜಿಟಲ್ ಗ್ರಂಥಾಲದ ಗ್ರಂಥಪಾಲಕಿ ಜ್ಯೋತಿ ಗಿಳಿಯಾರು ಸ್ವಾಗತಿಸಿ, ಪಂಚವರ್ಣದ ಸುಜಾತ ಬಾಯರಿ ನಿರೂಪಿಸಿ, ಪಂಚಾಯತ್ ಪಿಡಿಒ ಉಮೇಶ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!