ಬ್ರಹ್ಮಾವರ, ಮೇ 9: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಬೇಸಿಗೆಯಲ್ಲಿ ನಾಗರಿಕರಿಗೆ ತಂಪಾಗಿರಿಸುವ ಉದ್ದೇಶದಿಂದ ಮಜ್ಜಿಗೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಾವರ ಎಎಸ್ಐ ಕೃಷ್ಣಪ್ಪ ಕೆ ಉದ್ಘಾಟಿಸಿ ಶುಭ ಹಾರೈಸಿದರು.
ಗ್ರಾಮ ಪಂಚಾಯತ್ ಕಾರ್ಯದರ್ಶಿ ಶೇಖರ್ ನಾಯ್ಕ್, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್, ಕಾರ್ಯದರ್ಶಿ ಮಿಲ್ಟನ್ ಒಲಿವರ್, ಯುನಿಟ್ ಡೈರೆಕ್ಟರ್ ಸುಂದರ್ ಪೂಜಾರಿ, ಶ್ರೀನಾಥ್ ಕೋಟ, ಪ್ರತಿಭಾ, ವನಜಾಕ್ಷಿ, ಸುಧಾಕರ್ ನಾಯ್ಕ್, ರೋನಾಲ್ಡ್ ಡಯಾಸ್, ಗಾಯತ್ರಿ, ಆರಕ್ಷಕ ಠಾಣೆ ಸಿಬ್ಬಂದಿ ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು. ಮಧುಸೂದನ್ ಹೇರೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು ಸುಮಾರು 2,000 ಜನರಿಗೆ ಮಜ್ಜಿಗೆ ವಿತರಿಸಲಾಯಿತು.




By
ForthFocus™