Thursday, May 21, 2026
Thursday, May 21, 2026

ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

Date:

ಕುಂದಾಪುರ, ಮೇ 21: ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್‌ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು.

ಬಲಾಡಿಯ ಶ್ರೀ ಸ್ವಾಮಿಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ಪ್ರಭಾಕರ ಶೆಟ್ಟಿ, ಮೇಳದ ಯಜಮಾನರಾದ ವಿಠಲ ಪೂಜಾರಿ, ವರ್ತೆ ಪಂಜುರ್ಲಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಂಕರ ಎಸ್ ಕಾಂಚನ್, ಸದಸ್ಯರಾದ ಕೇಶವ ಕಾಂಚನ್, ಮಂಜುನಾಥ ಗುಡ್ರಿ, ವಿಜಯ್ ಕಾಂಚನ್, ರಾಘವೇಂದ್ರ ನೆಂಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸನ್ಮಾನಿತರನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಗರಸಭೆ: ಸಹಾಯವಾಣಿ ಸ್ಥಾಪನೆ

ಉಡುಪಿ, ಮೇ 21: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು...

61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ, ಮೇ 21: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986...

ಮಾನಸಿಕ ಆರೋಗ್ಯದಂತಹ ಕಾರ್ಯಕ್ರಮಗಳು ಯುವಜನತೆಗೆ ಅಗತ್ಯ: ಡಾ. ಪಿ.ವಿ ಭಂಡಾರಿ

ತೆಂಕನಿಡಿಯೂರು, ಮೇ 21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...

ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರಸಾದರಾಜ್ ಕಾಂಚನ್

ಕೊಡವೂರು, ಮೇ 20: ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ...
error: Content is protected !!