Monday, February 24, 2025
Monday, February 24, 2025

ಹಾಲು ಉತ್ಪಾದಕರ ಬಾಕಿ ಹಣ ನೀಡುವಂತೆ ಉಡುಪಿ ಕಿಸಾನ್ ಕಾಂಗ್ರೆಸ್ ಒತ್ತಾಯ

ಹಾಲು ಉತ್ಪಾದಕರ ಬಾಕಿ ಹಣ ನೀಡುವಂತೆ ಉಡುಪಿ ಕಿಸಾನ್ ಕಾಂಗ್ರೆಸ್ ಒತ್ತಾಯ

Date:

ಉಡುಪಿ: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಜನರು ಹೈನುಗಾರಿಕೆಯನ್ನು ಜೀವನಾಧಾರವಾಗಿ ಅವಲಂಬಿಸಿಕೊಂಡಿರುವುದರಿಂದ ಕಳೆದ ಹಲವಾರು ತಿಂಗಳಿನಿಂದ ಸರಕಾರ ಬಾಕಿ ಇರಿಸಿದ ಹಾಲಿನ ಸಹಾಯಧನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿದೆ.

ಈಗಿನ ಸರಕಾರವು ಪಶು ಆಹಾರದ ಬೆಲೆಯನ್ನು ದಿನದಿಂದ ದಿನಕ್ಕೆ ಏರಿಸುತ್ತಿದ್ದು ಹಾಲಿನ ದರವನ್ನು ಕಡಿಮೆ ಮಾಡುತ್ತಿದೆ, ಇದರಿಂದ ರೈತರಿಗೆ ಆದಾಯದಲ್ಲಿ ಬಹಳ ತೊಂದರೆಯಾಗುತ್ತಿದೆ. 800 ರೂಪಾಯಿಗೆ ಸಿಗುತ್ತಿದ್ದ ಪಶು ಆಹಾರ ಈಗ 1,100 ಆಗಿದೆ. ಆದರೆ ಹಾಲಿನ ದರ ಮಾತ್ರ ಯಥಾಸ್ಥಿತಿ ಇದೆ. ಅಲ್ಲದೇ ಅದಕ್ಕೆ ಕೊಡುವ ಸಹಾಯಧನ ಕೂಡ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ.

ಇದರಿಂದಾಗಿ ಹಾಲು ಉತ್ಪಾದಿಸುವ ರೈತರಿಗೆ ತುಂಬ ತೊಂದರೆಯಾಗುತ್ತಿದೆ. ಆದ್ದರಿಂದ ಪಶುಸಂಗೋಪನಾ ಇಲಾಖೆಯು ಕೂಡಲೇ ಈ ಬಗ್ಗೆ ಎಚ್ಚತ್ತುಕೊಂಡು ಹಾಲು ಉತ್ಪಾದಿಸುವ ರೈತರ ಸಹಾಯಧನವನ್ನು ಸಕಾಲ ದಲ್ಲಿ ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಎಲ್ಲೂರು ಶಶಿಧರ ಶೆಟ್ಟಿಯವರು ಸರಕಾರವನ್ನು ಒತ್ತಾಯಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!