ಉಡುಪಿ, ಮೇ 22: ಕೊಡವೂರು ಸಮೀಪದ ಗರಡಿಮಜಲು ಎಂಬಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಇನ್ನೋರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆದಿದೆ. ಮೃತಪಟ್ಟ ಕಾರ್ಮಿಕ ಕೊಪ್ಪಳ ಜಿಲ್ಲೆಯ ರಮೇಶ್ (25) ಎಂದು ಗುರುತಿಸಲಾಗಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ನೆರವಾದರು. ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ನಗರಸಭಾ ಸದಸ್ಯರಾದ ವಿಜಯ ಕೊಡವೂರು ಮುಂತಾದವರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೊಡವೂರು: ನಿರ್ಮಾಣ ಹಂತದ ಬಾವಿ ಕುಸಿದು ಕಾರ್ಮಿಕ ಸಾವು
ಕೊಡವೂರು: ನಿರ್ಮಾಣ ಹಂತದ ಬಾವಿ ಕುಸಿದು ಕಾರ್ಮಿಕ ಸಾವು
Date:




By
ForthFocus™