Sunday, May 31, 2026
Sunday, May 31, 2026

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

Date:

ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಿದ್ದಾಪುರ ಇಲ್ಲಿನ ಚಿತ್ರಕಲಾ ಶಿಕ್ಷಕ ರಾಜೇಂದ್ರ ಪೂಜಾರಿ ತ್ರಾಸಿಯವರಿಗೆ ಲಭಿಸಿದೆ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಮುಖ್ಯಸ್ಥರಾದ ಡಾ . ಮೋಹನ್ ರಾವ್ ಪಾಂಚಾಲ, ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎಸ್. ಸಿ ಪಾಟೀಲ್ ಹಾಗೂ ವಿಶ್ರಾಂತ ವಿಶೇಷಾಧಿಕಾರಿಗಳು ಕರ್ನಾಟಕ ಲಲಿತ ಕಲಾ ವಿಶ್ವವಿದ್ಯಾಲಯ ಬಾದಾಮಿ, ಇಳಕಲ್ ವಿಜಯ್ ಮಹಾಂತೇಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಬಸವರಾಜ್ ಗವಿಮಠ ಹಾಗೂ ರಮೇಶ್ ಕಮತಗಿ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ ಬಾಗಲಕೋಟೆ, ಸಾಹಿತಿ ಎಂವಿ ಷಡಕ್ಷರಿ ಹಾಗೂ ಮುಂತಾದವರು ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಒಟ್ಟು 19 ಮಂದಿ ಸಾಧಕರನ್ನು ಈ ವೇದಿಕೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉನ್ನತ ಮಟ್ಟದ ಬಾಂಬ್ ಪರೀಕ್ಷೆ ನಡೆಸಿದ ಡಿ.ಆರ್.ಡಿ.ಓ

ಪಂಚಕುಲ, ಮೇ 31: ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿರುವ ರಕ್ಷಣಾ ಸಂಶೋಧನೆ...

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮಾಳ-ತನಿಕೋಡು ಗೇಟ್ ರಸ್ತೆ ಪರಿಶೀಲನೆ

ಕಾರ್ಕಳ, ಮೇ 31: ಕಾರ್ಕಳ ತಾಲೂಕಿನ, ಮಾಳ ಗೇಟಿನಿಂದ ಎಸ್.ಕೆ ಬಾರ್ಡರ್...

ರಚನಾತ್ಮಕ ಪತ್ರಿಕೋದ್ಯಮವು ಯುವಕರಲ್ಲಿ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ: ಉಪರಾಷ್ಟ್ರಪತಿ ರಾಧಾಕೃಷ್ಣನ್

ಕೊಟ್ಟಾಯಂ, ಮೇ 31: ರಾಜಕೀಯ ನಾಯಕತ್ವವು ಸಾರ್ವಜನಿಕ ಜೀವನದ ಅತ್ಯಂತ ಬೇಡಿಕೆಯ...

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

ಕುಂದಾಪುರ, ಮೇ 31: ವಿದ್ಯಾರ್ಥಿಗಳು ವೃತ್ತಿಯ ಜೊತೆಗೆ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಆಮುಖೇನ...
error: Content is protected !!