Friday, July 24, 2026
Friday, July 24, 2026

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

Date:

ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಿದ್ದಾಪುರ ಇಲ್ಲಿನ ಚಿತ್ರಕಲಾ ಶಿಕ್ಷಕ ರಾಜೇಂದ್ರ ಪೂಜಾರಿ ತ್ರಾಸಿಯವರಿಗೆ ಲಭಿಸಿದೆ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಮುಖ್ಯಸ್ಥರಾದ ಡಾ . ಮೋಹನ್ ರಾವ್ ಪಾಂಚಾಲ, ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎಸ್. ಸಿ ಪಾಟೀಲ್ ಹಾಗೂ ವಿಶ್ರಾಂತ ವಿಶೇಷಾಧಿಕಾರಿಗಳು ಕರ್ನಾಟಕ ಲಲಿತ ಕಲಾ ವಿಶ್ವವಿದ್ಯಾಲಯ ಬಾದಾಮಿ, ಇಳಕಲ್ ವಿಜಯ್ ಮಹಾಂತೇಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಬಸವರಾಜ್ ಗವಿಮಠ ಹಾಗೂ ರಮೇಶ್ ಕಮತಗಿ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ ಬಾಗಲಕೋಟೆ, ಸಾಹಿತಿ ಎಂವಿ ಷಡಕ್ಷರಿ ಹಾಗೂ ಮುಂತಾದವರು ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಒಟ್ಟು 19 ಮಂದಿ ಸಾಧಕರನ್ನು ಈ ವೇದಿಕೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!