Saturday, July 25, 2026
Saturday, July 25, 2026

ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ

Date:

ಕುಂದಾಪುರ, ಜೂ.3: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ ‘ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ’ ಕಾರ್ಯಕ್ರಮ ಜೂನ್ 2ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಯು. ಸಿ. ನಿರಂಜನ್, ಡಾ. ಮುರಳಿಕೃಷ್ಣ ಎಸ್. ಎನ್., ಶಶಿಧರ್ ಶೆಟ್ಟಿ, ಡಾ. ಅಂಜಯ್ಯ ದೇವಿನೇನಿ ಹಾಗೂ ಶ್ರೀಮತಿ ರಾಜಲಕ್ಷ್ಮಿ ಆನಂದನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅತಿಥಿಗಳು ತಂತ್ರಜ್ಞಾನದ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ, ನವೀನತೆ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ನಿರಂತರವಾಗಿ ತಮ್ಮ ಜ್ಞಾನವನ್ನು ನವೀಕರಿಸಿಕೊಂಡು ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಮೂಲಕ ಯಶಸ್ಸು ಸಾಧಿಸಬಹುದು ಎಂದರು. ವಿದ್ಯಾರ್ಥಿಗಳು ನವೀನ ಯೋಜನೆಗಳ ಮೂಲಕ ಸಮಾಜಕ್ಕೆ ಉಪಯುಕ್ತವಾದ ಪರಿಹಾರಗಳನ್ನು ನೀಡುವಂತೆ ಕರೆ ನೀಡಿದರು.

ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ರಶ್ಮಿತಾ, ಅಪೂರ್ವ, ಸಿಂಚನಾ, ನಾಗಶ್ರೀ, ಅನುಶ್ರೀ ಶೆಟ್ಟಿ ಹಾಗೂ ಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಸಾನಿಕಾ ವಂದಿಸಿದರು. ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನವೀನ ಯೋಜನೆಗಳ ಪ್ರಸ್ತುತಿ ಗಮನ ಸೆಳೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!