Thursday, June 4, 2026
Thursday, June 4, 2026

ಕುಂದಾಪುರ: ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ

ಕುಂದಾಪುರ: ಪ್ರಾಕೃತಿಕ ವಿಕೋಪ ನಿರ್ವಹಣೆ – ತುರ್ತು ಸೇವಾ ಕೇಂದ್ರ ಸ್ಥಾಪನೆ

Date:

ಉಡುಪಿ, ಜೂ.3: ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಮಳೆಗಾಲದ ಸಮಯದಲ್ಲಿ ಅವಘಡಗಳನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಕುಂದಾಪುರ ಪುರಸಭೆಯ ವತಿಯಿಂದ 24×7 ಕಾರ್ಯನಿರ್ವಹಿಸುವ ಹೆಲ್ಪ್ಲೈನ್ ಕೇಂದ್ರವನ್ನು ತೆರೆಯಲಾಗಿದ್ದು, ಮಳೆಗಾಲದಲ್ಲಿ ಎದುರಾಗಬಹುದಾದ ಪ್ರವಾಹ, ಸಾಂಕ್ರಾಮಿಕ ರೋಗಗಳು ಮತ್ತು ಇತರೆ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಾರ್ವಜನಿಕರು ಹೆಲ್ಪ್ಲೈನ್ ಸಂಖ್ಯೆ :08254-230410 ಗೆ ಕರೆ ಮಾಡಬಹುದಾಗಿದೆ. ಮಳೆಗಾಲದ ಸಮಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು: ಅಪಾಯಕಾರಿ ಕಟ್ಟಡಗಳಿಂದ ದೂರವಿರಬೇಕು – ಮಳೆಯಿಂದಾಗಿ ಕುಸಿಯುವ ಹಂತದಲ್ಲಿರುವ ಹಳೆಯ ಗೋಡೆ ಅಥವಾ ಕಟ್ಟಡಗಳ ಆಸುಪಾಸಿನಲ್ಲಿ ಆಶ್ರಯ ಪಡೆಯಬಾರದು. ವಿದ್ಯುತ್ ಕಂಬಗಳಿಂದ ಎಚ್ಚರ – ರಸ್ತೆ ಬದಿಯ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್‌ಗಳು ಹಾಗೂ ಜೋತಾಡುವ ವಿದ್ಯುತ್ ತಂತಿಗಳನ್ನು ಮುಟ್ಟಬಾರದು. ಮರಗಳ ಕೆಳಗೆ ನಿಲ್ಲಬಾರದು – ಬಿರುಗಾಳಿ ಸಹಿತ ಭಾರಿ ಮಳೆ ಬರುವಾಗ ದೊಡ್ಡ ಮರಗಳು ಅಥವಾ ಜಾಹೀರಾತು ಫಲಕಗಳ (ಹೋರ್ಡಿಂಗ್ಸ್) ಕೆಳಗೆ ವಾಹನ ನಿಲ್ಲಿಸುವುದನ್ನು ತಪ್ಪಿಸಬೇಕು. ತ್ಯಾಜ್ಯ ವಿಲೇವಾರಿ – ಒಣ ಮತ್ತು ಹಸಿ ಕಸವನ್ನು ಚರಂಡಿಗಳಿಗೆ ಎಸೆಯಬಾರದು. ಇದು ಚರಂಡಿ ಬ್ಲಾಕ್ ಆಗಿ ನೀರು ರಸ್ತೆಗೆ ನುಗ್ಗಲು ಕಾರಣವಾಗುತ್ತದೆ.

ಮಳೆಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ತುರ್ತು ಪರಿಸ್ಥಿತಿ ಎದುರಾದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಮೊ. ಸಂಖ್ಯೆ :9880034793, ಪರಿಸರ ಅಭಿಯಂತರು ಮೊ ಸಂಖ್ಯೆ : 7353255268, ಹಿರಿಯ ಆರೋಗ್ಯ ನಿರೀಕ್ಷಕರು ಮೊ.ಸಂಖ್ಯೆ 6360027331 ಹಾಗೂ ಕಿರಿಯ ಅಭಿಯಂತರರ ಮೊ.ನಂ: 9902377287 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!